ಕರಿಕೆ, ಜು. 19: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ತಾ. 20ರಂದು (ಇಂದು) ಕನ್ನಡಶಾಲೆ ಉಳಿಸಿ, ಬೆಳೆಸಿ ಅಭಿಯಾನದ ಉದ್ಘಾಟನಾ ಸಮಾರಂಭ ಹಾಗೂ 10 ಶಾಲೆಗಳ ನಲಿಕಲಿ ವಿಭಾಗದ ಮಕ್ಕಳಿಗೆ ಕುರ್ಚಿ, ಮೇಜು ವಿತರಣಾ ಸಮಾರಂಭ ನಡೆಯಲಿದೆ.

ಕಾಸ್ಪಾಡಿ ಪೆರಾಜೆಯ ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ. ಕೃಷ್ಣೇಗೌಡರು ಉದ್ಘಾಟಿಸುವರು. ಕೊಡಗು ಜಿಲ್ಲಾಧ್ಯಕ್ಷ ಉನೈಸ್ ಪೆರಾಜೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯ ನಾಗೇಶ್ ಕುಂದಲ್ಪಾಡಿ, ಪೆರಾಜೆ ಗ್ರಾ.ಪಂ. ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಶ್ರೀ ಶಾಸ್ತಾವು ದೇವಸ್ಥಾನದ ಮೊಕ್ತೇಸರರಾದ ಸುರೇಶ್ ಪೆರುಮುಂಡ, ಕರವೇ ಬಣದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಾಣಿಮಾಚಿಮಾಡ ಉಪಸ್ಥಿತರಿರುವರು. ಇದೇ ಸಂದರ್ಭ ಗ್ರಾಮಾಂತರ ಠಾಣಾಧಿಕಾರಿ ಚೇತನ ಅವರನ್ನು ಸನ್ಮಾನಿಸಲಾಗುವದೆಂದು ಪ್ರಕಟಣೆ ತಿಳಿಸಿದೆ.