ಸೋಮವಾರಪೇಟೆ, ಜು. 19: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಗರ ಪತ್ರಕರ್ತರ ಸಂಘ ಹಾಗೂ ಪತ್ರಿಕಾಭವನ ಟ್ರಸ್ಟ್ ಸಹಯೋಗದೊಂದಿಗೆ ತಾ. 20ರಂದು(ಇಂದು) ಪತ್ರಿಕಾ ದಿನಾಚರಣೆ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ್ ಹಾನಗಲ್ ತಿಳಿಸಿದ್ದಾರೆ.

ಪೂರ್ವಾಹ್ನ 10.30ಕ್ಕೆ ಇಲ್ಲಿನ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಅಧ್ಯಕ್ಷತೆಯನ್ನು ತಾಲೂಕು ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್‍ಕುಮಾರ್ ವಹಿಸಲಿದ್ದು, ಉದ್ಯಮಿಗಳಾದ ಹರಪಳ್ಳಿ ರವೀಂದ್ರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಅತಿಥಿಗಳಾಗಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಭಾರತೀಯ ಪತ್ರಕರ್ತರ ಒಕ್ಕೂಟದ ಸದಸ್ಯ ಎಸ್.ಎ. ಮುರುಳೀಧರ್, ರಾಜ್ಯ ಸಂಘದ ನಿರ್ದೇಶಕ ಅಜ್ಜಮಾಡ ರಮೇಶ್ ಕುಟ್ಟಪ್ಪ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಎಸ್.ಮಹೇಶ್, ನಗರ ಪತ್ರಕರ್ತರ ಸಂಘದ ಅಧ್ಯಕ್ಷ ಡಿ.ಪಿ. ಲೋಕೇಶ್ ಅವರುಗಳು ಭಾಗವಹಿಸಲಿದ್ದಾರೆ.

ಅಪರಾಹ್ನ 12 ಗಂಟೆಗೆ ತಾಲೂಕು ಪತ್ರಕರ್ತರ ಸಂಘದಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಗ್ರೀನ್‍ವ್ಯಾಲಿ ಪ್ರಾಡಕ್ಟ್ಸ್‍ನ ವ್ಯವಸ್ಥಾಪಕ ಪಾಲುದಾರ ಮಧು ಬೋಪಣ್ಣ ಪ್ರಶಸ್ತಿ ವಿತರಣೆ ಮಾಡಲಿದ್ದಾರೆ. ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಚಂಗಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ