ಒಡೆಯನಪುರ, ಜು. 19: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಂಜೂರಾತಿ ಮಾಡಿರುವ ರೂ. 25 ಸಾವಿರ ಅನುದಾನದ ಚೆಕ್ ಅನ್ನು ಇಲ್ಲಿಗೆ ಸಮೀಪದ ಕೊರಳಹಳ್ಳಿ ಗ್ರಾಮದ ಚೌಡೇಶ್ವರಿ ದೇವಾಲಯದ ಸಮಿತಿ ಪದಾಧಿಕಾರಿಗಳಿಗೆ ಯೋಜನೆಯ ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್ ವಿತರಿಸಿದರು.

ಈ ಸಂದರ್ಭ ವಲಯ ಮೇಲ್ವಿಚಾರಕ ರವಿಪ್ರಸಾದ್ ಅಲಾಜೆ, ದೇವಾಲಯ ಸಮಿತಿ ಪದಾಧಿಕಾರಿಗಳಾದ ಚಂದ್ರಪ್ಪ, ವಸಂತ್, ಪುನೀತ್, ದೇವರಾಜ್, ಸುನೀತ ಮುಂತಾದವರು ಉಪಸ್ಥಿತರಿದ್ದರು.