ಮಡಿಕೇರಿ, ಜು. 24: ಕಾಫಿ ಬೆಳೆಗಾರರ ಸಮಸ್ಯೆಯನ್ನು ಪರಿಪೂರ್ಣ ವಾಗಿ ಅಧ್ಯಯನ ನಡೆಸಿ ಕಾಫಿ ಮಂಡಳಿ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡುವ ನಿಟ್ಟಿನಲ್ಲಿ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ವಿಶೇಷ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.ದೆಹಲಿಯಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟ, ಕರ್ನಾಟಕ ಬೆಳೆಗಾರರ ಸಂಘ ಮತ್ತು ಉಪಾಸಿ ಸೇರಿದಂತೆ ವಿವಿಧ ಕಾಫಿ ಬೆಳೆಗಾರ ಗೋಯಲ್ ವಿಶೇಷ ಸಮಿತಿಯೊಂದನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ದೆಹಲಿಯಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟ, ಕರ್ನಾಟಕ ಬೆಳೆಗಾರರ ಸಂಘ ಮತ್ತು ಉಪಾಸಿ ಸೇರಿದಂತೆ ವಿವಿಧ ಕಾಫಿ ಬೆಳೆಗಾರ ಈ ಸಂದರ್ಭ ಸಚಿವ ಪಿಯೂಷ್ ಗೋಯಲ್, ಕಾಫಿ ಬೆಳೆಗಾರರ ಸಮಸ್ಯೆಯನ್ನು ಖುದ್ದಾಗಿ ಪರಿಶೀಲಿಸಲು ಕೇಂದ್ರದ ವಾಣಿಜ್ಯ ಇಲಾಖೆಯ ತೋಟಗಾರಿಕಾ ವಿಭಾಗದ ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ಮತ್ತು ತೋಟಗಾರಿಕಾ ವಿಭಾಗದ ನಿರ್ದೇಶಕ ಪಿ. ಶರವಣನ್ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆಯ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದರು,.

ಈ ಸಮಿತಿಯು 15 ದಿನಗಳೊ¼ Àಗಾಗಿ ಸಂಸತ್ತಿನ ಅಧಿವೇಶನ ಮುಗಿದ ಬಳಿಕ ಕಾರ್ಯಾರಂಭ ಮಾಡಲಿದ್ದು, ಕಾಫಿ ಬೆಳೆಯುವ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆಗಾರರ ಸಮಸ್ಯೆಗಳನ್ನು ಕೂಲಂಕುಶವಾಗಿ ಪರಿಶೀಲಿಸಲಿದೆ. ಬೆಳೆಗಾರರ ಸಂಘಟನೆಗಳೊಂದಿಗೆ ಚರ್ಚಿಸಿ ಅಧ್ಯಯನ ನಡೆಸಲಿದೆ. ಈ ಸಮಿತಿ ನೀಡುವ ವರದಿ ಆಧಾರದಲ್ಲಿ ಕೇಂದ್ರ ಸರ್ಕಾರ ಕಾಫಿ ಬೆಳೆಗಾರರಿಗೆ ಯಾವ ರೀತಿಯಲ್ಲಿ ಸಹಾಯ ಮಾಡಬಹುದು ಎಂದು ತೀರ್ಮಾನಿಸುವದಾಗಿ ಪಿಯೂಶ್ ಗೋಯಲ್ ತಿಳಿಸಿದರು.

ಕೇಂದ್ರ ವಾಣಿಜ್ಯ ಸಚಿವರನ್ನು ದೆಹಲಿಯಲ್ಲಿ ಭೇಟಿಯಾದ ನಿಯೋಗದಲ್ಲಿ ಸಂಸದರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ, ಮುನಿಸ್ವಾಮಿ, ಪ್ರಭಾಕರ ಕೋರೆ, ಶಿವಕುಮಾರ ಉದಾಸಿ, ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್. ಬೋಜೇಗೌಡ, ಉಪಾಸಿಯ ಕಾಫಿ ಸಮಿತಿ ಅಧ್ಯಕ್ಷ ಜೆಫ್ರಿ ರೆಬೆಲ್ಲೋ, ಕರ್ನಾಟಕ ಬೆಳೆಗಾರರ ಸಂಘದ ಉಪಾಧ್ಯಕ್ಷ ಶಿರಿಷ್ ವಿಜಯೇಂದ್ರನ್, ಕೊಡಗು ಬೆಳೆಗಾರರ ಸಂಘದ ಪ್ರತಿನಿಧಿ ಐಚೆಟ್ಟೀರ ಬೋಪಣ್ಣ, ಕಾಫಿ ಎಕ್ಸ್ ಪೆÇೀಟ್ರ್ರರ್ಸ್ ಅಸೋಸಿಯೇಷನ್ ಅಧ್ಯಕ್ಷ ರಮೇಶ್ ರಾಜ, ಕಾಫಿ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀವತ್ಸ ಕೃಷ್ಣ ಪಾಲ್ಗೊಂಡಿದ್ದರು.

ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಕೇಂದ್ರ ಸರ್ಕಾರವು ಕಾಫಿ ಬೆಳೆಗಾರರ ಸಂಕಷ್ಟದ ಬಗ್ಗೆ ಯಾವ ರೀತಿಯಲ್ಲಿ ಪರಿಹಾರ ಮಾಡಬಹುದು ಎಂದು ಸ್ಪಷ್ಟ ನಿರ್ಧಾರ ಕೈಗೊಂಡಿರುವದಾಗಿ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ. ತೀರ್ಥಮಲ್ಲೇಶ್ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.