ಮಡಿಕೇರಿ, ಆ. 13: ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ 2019-20 ನೇ ಸಾಲಿನ ಎಸ್ಎಫ್ಸಿ ಮುಕ್ತನಿಧಿ ಮತ್ತು ನಗರಸಭಾ ನಿಧಿ ಶೇ. 24.10 ಯೋಜನೆಯಡಿ ಕಲ್ಯಾಣಕ್ಕಾಗಿ 1 ವರ್ಷದಿಂದ 15 ವರ್ಷದೊಳಗಿನ ಮಕ್ಕಳಿಗೆ ಜೀವ ವಿಮೆ ಮಾಡಿಸುವದು (ಲೈಫ್ ಸೆಕ್ಯೂರಿಟಿ ಬಾಂಡ್), ಬ್ಯಾಂಕ್ನಿಂದ ಸ್ವಯಂ ಉದ್ಯೋಗಕ್ಕಾಗಿ ಸಾಲ ಪಡೆಯಲು ಫಲಾನುಭವಿಗಳಿಗೆ ಸಹಾಯ ಧನಕ್ಕಾಗಿ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಹಾಗೂ ಎಂ.ಬಿ.ಬಿ.ಎಸ್, ಬಿ.ಎ, ಎಂ.ಬಿ.ಎ ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ಪಡೆಯಲು ಶೇ. 80 ರಷ್ಟು ಅಂಕ ಹೊಂದಿರಬೇಕು.
ಶೇ. 7.25 ಯೋಜನೆಯಡಿ ಇತರ ಬಡಜನರ ಕಲ್ಯಾಣಕ್ಕಾಗಿ ವೈದ್ಯಕೀಯ ಶಸ್ತ್ರ ಚಿಕಿತ್ಸೆ ಮಾಡಿಕೊಂಡ ಫಲಾನುಭವಿಗಳಿಗೆ ವೈದ್ಯಕೀಯ ಚಿಕಿತ್ಸೆಯ ವೆಚ್ಚ ಮರುಪಾವತಿ ಮಾಡುವದು. ಶೇ. 5ರ ಯೋಜನೆಯಡಿ ವಿಶೇಷಚೇತನರ ಕಲ್ಯಾಣಕ್ಕಾಗಿ ಬ್ಯಾಂಕಿನಿಂದ ಸ್ವ-ಉದ್ಯೋಗಕ್ಕಾಗಿ ಸಾಲ ಪಡೆಯುವ ವಿಶೇಷಚೇತನ ಫಲಾನುಭವಿಗಳಿಗೆ ಸಹಾಯಧನ (ಸಬ್ಸಿಡಿ) ಹಾಗೂ ವಿಶೇಷಚೇತನರಲ್ಲಿ ರಾಜ್ಯ, ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕøತಿಕ ಹಾಗೂ ಇತರ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವರಿಗೆ ಪ್ರೋತ್ಸಾಹ ಧನಕ್ಕಾಗಿ ಹಾಗೂ ವಿಶೇಷಚೇತನರನ್ನು ಪೋಷಿಸುವ ಪೋಷಕರಿಗೆ ಪೋಷಣಾ ಭತ್ಯೆ ನೀಡುವದು.
ಅರ್ಜಿಯೊಂದಿಗೆ ಚಾಲ್ತಿಯಲ್ಲಿರುವ ಆದಾಯ ಮತ್ತು ದೃಢೀಕರಣ ಪ್ರತಿ, ಶಾಲಾ ದಾಖಲಾತಿಗಳು, ಆಧಾರ್ ಕಾರ್ಡ್, ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ, ಪಡಿತರ ಚೀಟಿ, ಚಾಲ್ತಿ ವರ್ಷದ ಕಂದಾಯ ರಶೀದಿ, ಸಂಬಂಧಿಸಿದ ಇಲಾಖೆಯಿಂದ ನೀಡಿದ ಅಂಗವಿಕಲರ ಗುರುತಿನ ಚೀಟಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತ ಎಂ.ಎಲ್. ರಮೇಶ್ ತಿಳಿಸಿದ್ದಾರೆ.