ಸೋಮವಾರಪೇಟೆ, ಆ. 13: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ‘ಬಿ’ ಒಕ್ಕೂಟದಿಂದ, ಸೋಮವಾರಪೇಟೆ ಪಟ್ಟಣದ ಕರ್ಕಳ್ಳಿಯಲ್ಲಿರುವ ಕಟ್ಟೆ ಬಸವೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
ಒಕ್ಕೂಟದ ಸೇವಾ ಪ್ರತಿನಿಧಿ ಶೈಲಾ ವಸಂತ್, ಅಧ್ಯಕ್ಷೆ ನಾಗಮ್ಮ ಮತ್ತು ಸ್ವಸಹಾಯ ಸಂಘದ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.