ಸೋಮವಾರಪೇಟೆ, ಆ.12: ಹಿರಿಯರು ಆಚರಿಸಿಕೊಂಡು ಬಂದ ಆಚಾರ-ವಿಚಾರ, ಸಂಪ್ರದಾಯ ಗಳನ್ನು ಯುವ ಜನಾಂಗಕ್ಕೆ ಪರಿಚಯಿಸುವದನ್ನು ಕಾರ್ಯ ಕ್ರಮಗಳ ಮೂಲಕ ಮಾಡುವಂತಹ ಪರಿಸ್ಥಿತಿ ಬಂದೊದಗಿ ರುವದು ದುರಂತ ಎಂದು ರೋಟರಿ ಜಿಲ್ಲಾ ಮಾಜಿ ಸಹಾಯಕ ರಾಜ್ಯಪಾಲ ಬಿ.ಎಸ್. ಸದಾನಂದ್ ವಿಷಾದಿಸಿದರು. ಸೋಮವಾರಪೇಟೆ ತಾಲೂಕು ಶ್ರೀ ನಾರಾಯಣಗುರು ಸೇವಾ ಸಮಿತಿ ಹಾಗೂ ತುಳುನಾಡ ಬಿಲ್ಲವ ಮಹಿಳಾ ಸಂಘ ಇದರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಜಾನಕಿ ಕನ್ವೆನ್‍ಷನ್ ಹಾಲ್‍ನಲ್ಲಿ ಆಯೋಜಿಸಿದ್ದ 7ನೇ ವರ್ಷದ ಆಟಿ ಕಾರ್ಯಕ್ರ ಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸುವ ಪ್ರಯತ್ನದಂತೆ ಉತ್ತಮವಾದ ಸಂಸ್ಕಾರ, ಸಂಪ್ರದಾಯ ಗಳನ್ನು ಕಲಿಸುವ ಜವಾಬ್ದಾರಿ ಪೋಷಕರ ಮೇಲಿದೆ. ಇಂತಹ ಕೆಲಸ ವನ್ನು ಇಲ್ಲಿನ ಶ್ರೀ ನಾರಾಯಣ ಗುರು ಸೇವಾ ಸಮಿತಿಯವರು ಮಾಡುತ್ತಿರುವದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸ್ಪೂರ್ತಿ ನೀಡುತ್ತಿದ್ದು, ಇದನ್ನು ಜನಾಂಗ ಬಾಂಧವರು ಸದುಪಯೋಗಪಡಿಸಿ ಕೊಂಡು, ಸಂಘ ಆಯೋಜಿಸುವ ಕಾರ್ಯಗಳಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ಬಿ.ಎ. ಭಾಸ್ಕರ್ ವಹಿಸಿದ್ದರು. ವೇದಿಕೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ಎನ್.ಡಿ. ಕೃಷ್ಣಪ್ಪ, ದಾನಿಗಳಾದ ಕಾಗಡಿಕಟ್ಟೆ ಬಿ.ಆರ್. ಮಂಜುನಾಥ್, ತುಳುನಾಡ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಬೇಬಿ ಚಂದ್ರಹಾಸ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮ ಗಳನ್ನು ನಡೆಸಲಾಯಿತು. ಆಟಿ ತಿಂಗಳ ಸಂಪ್ರದಾಯದ ಊಟೋಪ ಚಾರಗಳನ್ನು ಉಣಬಡಿಸಲಾಯಿತು.