ಶನಿವಾರಸಂತೆ, ಆ. 18: ಜಿಲ್ಲೆಯಲ್ಲಿ ಈ ಸಾಲಿನಲ್ಲಿ ಅತಿವೃಷ್ಟಿಯಿಂದ ಭಾರೀ ಮಳೆಯಿಂದಾಗಿ ಉಂಟಾಗಿದ್ದಾಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲೆಗೆ ಆಗಮಿಸಿದ್ದ ಸಂದರ್ಭ ಕೊಡ್ಲಿಪೇಟೆಗೆ ಭೇಟಿ ನೀಡಿದ್ದರು.

ಈ ಸಂದರ್ಭ ಮಾತನಾಡಿದ ಅವರು ವೀರರನಾಡು ಕೊಡಗಿನ ಜನತೆ ಇಂತಹ ಪ್ರಕೃತಿಯ ವಿಕೋಪಕ್ಕೆ ತುತ್ತಾಗಿದೆ ಯಾರು ವಿಚಲಿತರಾಗುವದು ಬೇಡ ನಿಮ್ಮ ಜೊತೆ ನಾವಿದ್ದೇವೆ. ದುಃಖ ದುಮ್ಮಾನಗಳಿಗೆ ಸ್ಪಂದಿಸಲು ಜೆಡಿಎಸ್ ಪಕ್ಷ ಸದಾ ಸಿದ್ಧವಿದೆ. ಪ್ರಕೃತಿ ವಿಕೋಪವನ್ನು ಶಾಶ್ವತವಾಗಿ ತಡೆಯಲು ಉನ್ನತ ಮಟ್ಟದ ಕಾರ್ಯತಂತ್ರ ರೂಪಿಸಬೇಕಿದೆ ಎಂದು ಅಭಯ ಹಸ್ತ ನೀಡಿದರು.

ಈ ಸಂದರ್ಭ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್.ಡಿ. ತಮ್ಮಯ್ಯ, ಹೋಬಳಿ ಅಧ್ಯಕ್ಷ ಚಂದ್ರಶೇಖರ್, ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಎಂ.ಎ. ಆದಿಲ್ ಪಾಶ, ಜಿಲ್ಲಾ ಉಪಾಧ್ಯಕ್ಷ ಡಿ.ಪಿ. ಬೋಜಪ್ಪ ಮುಖಂಡರಾದ ಸಂಗಮೇಶ್, ಕಾಂತರಾಜ್, ಪಂಚಾಯಿತಿ ಉಪಾಧ್ಯಕ್ಷ ವಿಜಯ್, ಸೂರ, ಇಸ್ಮಾಯಿಲ್, ಅಲ್ತಾಫ್, ಷರೀಫ್ ಹಾಗೂ ರಿತೇಶ್ ಕುಮಾರ್, 300ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರು.