ಮಡಿಕೇರಿ, ಆ. 20: ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ‘ಸದ್ಭಾವನಾ ದಿನಾಚರಣೆ’ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಬೋಧಿಸಿದರು, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡುತ್ತೇನೆ.

ಅಲ್ಲದೇ ವೈಯಕ್ತಿಕವಾಗಿ ಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಪ್ರತಿಜ್ಞೆ ಮಾಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಇಲಾಖೆ ಅಧಿಕಾರಿಗಳು ಇದ್ದರು.