ಸೋಮವಾರಪೇಟೆ,ಆ.25: ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗಳಿಸಿರುವ ವಿದ್ಯಾರ್ಥಿನಿ ಸಿ.ಎಂ. ರಾಶಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ರಾಜ್ಯಮಟ್ಟದ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಭಾಜನಳಾಗಿರುವ ರಾಶಿ, ಸೋಮವಾರಪೇಟೆ ಸಮೀಪದ ಕೂತಿ ಗ್ರಾಮದ ಮಂಜುನಾಥ್ ಮತ್ತು ಪರಿಮಳ ದಂಪತಿಯ ಪುತ್ರಿಯಾಗಿದ್ದು, ಪ್ರಸ್ತುತ ಬೆಂಗಳೂರಿನ ಸಾಯಿ ಕ್ರೀಡಾ ವಸತಿ ನಿಲಯದಲ್ಲಿ ಅಭ್ಯಾಸ ಮಾಡುತ್ತಿದ್ದಾಳೆ. ಈಕೆಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಮತ್ತು ಸಿದ್ದು ಅವರುಗಳು ತರಬೇತಿ ನೀಡುತ್ತಿದ್ದಾರೆ.