ಮಡಿಕೇರಿ, ಆ. 30: ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾದವರಿಗೆ ಪರಿಹಾರ ಕಲ್ಪಿಸಲು ಐಸಿಐಸಿಐ ಬ್ಯಾಂಕ್ 20 ಲಕ್ಷ ರೂಪಾಯಿಗಳ ನೆರವು ನೀಡಿದೆ.

ಐಸಿಐಸಿಐ ಬ್ಯಾಂಕಿನ ಆರೈಬಿಜಿ ಶಾಖಾ ಬ್ಯಾಂಕಿಂಗ್ ಪ್ರಾದೇಶಿಕ ಮುಖ್ಯಸ್ಥೆ ಪ್ರತಿಭಾ ಎಸ್. ಅವರು ಗುರುವಾರ ಜಿಲ್ಲೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದರು.

ಕೊಡಗು, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು, ಧಾರವಾಡ, ಹಾಸನ, ಕಲ್ಬುರ್ಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲಾಡಳಿತಗಳಿಗೆ ನೆರೆ ಪರಿಹಾರ ಕಾರ್ಯಗಳಿಗಾಗಿ ಬ್ಯಾಂಕ್ ಒಟ್ಟು 1.45 ಕೋಟಿ ರೂಪಾಯಿಗಳ ದೇಣಿಗೆ ನೀಡಿದ್ದು, ಆಯಾ ಜಿಲ್ಲಾಧಿಕಾರಿಗಳಿಗೆ ನೆರವಿನ ಚೆಕ್ ಹಸ್ತಾಂತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಎಂ.ಎಸ್. ರಾಮಯ್ಯ ಗ್ರೂಪ್ ನೆರವು

* ರಾಜ್ಯದಲ್ಲಿ ಉಂಟಾದ ಪ್ರವಾಹದಿಂದ ಸಂತ್ರಸ್ತರಾದವರ ನೆರವಿಗೆ ಎಂ.ಎಸ್. ರಾಮಯ್ಯ ಗ್ರೂಪ್ ವತಿಯಿಂದ ರೂ. 2 ಕೋಟಿ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮಾಜಿ ಸಚಿವ ಎಂ.ಆರ್. ಸೀತಾರಾಂ ಅವರ ಸಹೋದರ ಡಾ. ಎಂ.ಆರ್. ಜಯರಾಂ ಹಸ್ತಾಂತರಿಸಿದರು.