ಸೋಮವಾರಪೇಟೆ, ಆ. 30: ಕೇಂದ್ರದ ಮಾಜಿ ವಿತ್ತ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರ ನಿಧನಕ್ಕೆ ಸೋಮವಾರಪೇಟೆ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಸಂತಾಪ ಸಭೆ ನಡೆಯಿತು.

ಇಲ್ಲಿನ ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಅರುಣ್ ಜೇಟ್ಲಿಯವರ ನಿಧನಕ್ಕೆ ಸಂತಾಪ ಸೂಚಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮಾತನಾಡಿ, ಜೇಟ್ಲಿಯವರ ನಿಧನ ಬಿಜೆಪಿ ಸೇರಿದಂತೆ ದೇಶಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದರು.

ಈ ಸಂದರ್ಭ ತಾ.ಪಂ. ಸದಸ್ಯೆ ತಂಗಮ್ಮ. ಪ.ಪಂ. ಸದಸ್ಯರುಗಳಾದ ಬಿ.ಆರ್. ಮಹೇಶ್, ಪಿ.ಕೆ. ಚಂದ್ರು, ಪಕ್ಷದ ನಗರಾಧ್ಯಕ್ಷ ಎಸ್.ಆರ್. ಸೋಮೇಶ್, ತಾಲೂಕು ಕಾರ್ಯದರ್ಶಿ ಮನುಕುಮಾರ್ ರೈ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕಿಬ್ಬೆಟ್ಟ ಮಧು, ತಾಲೂಕು ಕಾರ್ಯದರ್ಶಿ ಶರತ್, ಉಪಾಧ್ಯಕ್ಷ ಪಿ. ಮಧು ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.