ಕುಶಾಲನಗರ, ಸೆ. 5: ಕುಶಾಲನಗರ ರೋಟರಿ ವತಿಯಿಂದ ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು.

ಪಟ್ಟಣ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಶ್ರಮ ಮತ್ತು ನಾಗರಿಕರಿಗೆ ರಕ್ಷಣೆ ಒದಗಿಸುತ್ತಿರುವ ಸೇವೆಯನ್ನು ಪರಿಗಣಿಸಿ ರೋಟರಿ ಸಂಸ್ಥೆ, ರೋಟರಿ ಇಂಟರ್ಯಾಕ್ಟ್ ಕ್ಲಬ್ ಮೂಲಕ ಪೊಲೀಸ್ ಸಿಬ್ಬಂದಿಗಳಿಗೆ ಹೂಗುಚ್ಚ ನೀಡಿ, ಸಿಹಿ ವಿತರಿಸಿ ಗೌರವಿಸಲಾಯಿತು. ರೋಟರಿ ಅಧ್ಯಕ್ಷ ಅಶೋಕ್, ಕಾರ್ಯದರ್ಶಿ ಸಂಜು ಬೆಳ್ಳಿಯಪ್ಪ, ಪ್ರಮುಖರಾದ ಎಸ್.ಕೆ. ಸತೀಶ್, ಶೋಭಾ ಸತೀಶ್, ಕ್ರಿಜ್ವಲ್ ಕೋಟ್ಸ್, ಚಂದ್ರಶೇಖರ್, ಜೇಕಬ್, ಪ.ಪಂ. ಸದಸ್ಯೆ ರೂಪ ಉಮಾಶಂಕರ್ ಮತ್ತಿತರರು ಇದ್ದರು.