ಮಡಿಕೇರಿ, ಸೆ. 5: ಸಮರ್ಥ ಕನ್ನಡಿಗರು ಸಂಸ್ಥೆ ವತಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ವಿವಿಧ ಸಾಂಸ್ಕøತಿಕ ಸ್ಪರ್ಧೆಗಳನ್ನು ತಾ. 22 ರಂದು ನಗರದ ಓಂಕಾರ ಸದನದಲ್ಲಿ ಆಯೋಜಿಸಲಾಗಿದೆ ಎಂದು ಸಮರ್ಥ ಕನ್ನಡಿಗ ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ. ಜಯಲಕ್ಷ್ಮಿ ತಿಳಿಸಿದ್ದಾರೆ. ಸ್ಪರ್ಧೆಗಳ ವಿವರ: ಎಲ್.ಕೆ.ಜಿ.ಯಿಂದ 2ನೇ ತರಗತಿಯ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ, 3 ರಿಂದ 5ನೇ ತರಗತಿ ಮಕ್ಕಳಿಗೆ ಕತೆ ಹೇಳುವ ಸ್ಪರ್ಧೆ, 6 ರಿಂದ 7ನೇ ತರಗತಿ ಮಕ್ಕಳಿಗೆ ಜಾನಪದ ನೃತ್ಯ ಸ್ಪರ್ಧೆ, 8 ರಿಂದ 10ನೇ ತರಗತಿ ಮಕ್ಕಳಿಗೆ ತಪ್ಪಿಲ್ಲದೆ ಕನ್ನಡ ಶುದ್ಧ ಬರಹ ಸ್ಪರ್ಧೆ, ಪದವಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ಮಹಿಳೆಯರಿಗೆ ಸಮೂಹ ಗಾಯನ ಸ್ಪರ್ಧೆ, ಪದವಿಪೂರ್ವ ವಿದ್ಯಾರ್ಥಿಗಳಿಗೆ ವೈಯಕ್ತಿಕ ನೃತ್ಯ ಸ್ಪರ್ಧೆ ಆಯೋಜಿಸಲಾಗಿದೆ. ಸ್ಥಳದಲ್ಲಿ ಹೆಸರು ಕೊಟ್ಟು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಈ ಸ್ಪರ್ಧೆಗಳಿಗೆ ಹೆಸರು ನೋಂದಾಯಿಸಲು ಕೊನೆಯ ದಿನಾಂಕ ತಾ. 14. ಹೆಸರು ನೋಂದಣಿಗೆ ಜಯಲಕ್ಷ್ಮಿ ಕೆ. (9663119670) ಲವಿನ್ ಲೋಪೆಸ್: (8105096936), ಮಂಜುಳ ದೇವರಾಜ್ (9449859988) ಅವರನ್ನು ಸಂಪರ್ಕಿಸಬಹುದಾಗಿದೆ.