ಸೋಮವಾರಪೇಟೆ, ಸೆ. 7: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸುರೇಶ್ ಅವರನ್ನು ಠಾಣೆಯ ವತಿಯಿಂದ ಬೀಳ್ಕೊಡಲಾಯಿತು.
ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಮುರುಳೀಧರ್, ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್ ಸೇರಿದಂತೆ ಸಿಬ್ಬಂದಿಗಳು, ನೆನಪಿನ ಕಾಣಿಕೆ ನೀಡಿ ಸುರೇಶ್ ಅವರನ್ನು ಬೀಳ್ಕೊಟ್ಟರು.