*ಗೋಣಿಕೊಪ್ಪಲು, ಸೆ. 8: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ, ಬಿಜೆಪಿ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕೆಲಸ ಮಾಡಿದ್ದು, ಪಕ್ಷದಿಂದ ಅಮಾನತ್ತುಗೊಂಡಿದ್ದ ಕಾಳಪಂಡ ಟಿಪ್ಪು ಬಿದ್ದಪ್ಪ ಅವರ ಅಮಾನತ್ತನ್ನು ರದ್ದುಪಡಿಸಿ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆಗೊಳಿಸಲಾಗಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಕುಂಞಂಗಡ ಅರುಣ್ ಭೀಮಯ್ಯ ಈ ಕುರಿತು ತಿಳಿಸಿದ್ದಾರೆ.