ಮಡಿಕೇರಿ, ಸೆ. 9: ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ತಾ. 11 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಕುಶಾಲನಗರ ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ. 11 ರಂದು ಮಧ್ಯಾಹ್ನ 1 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಸೋಮವಾರಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ಮಡಿಕೇರಿ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು / ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.