ಮಡಿಕೇರಿ, ಸೆ.13: ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ‘ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ’ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ತಾ.20 ರೊಳಗೆ ಆಯಾಯ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಪೊನ್ನಂಪೇಟೆ, ವೀರಾಜಪೇಟೆ ತಾಲೂಕು, ಸೋಮವಾರಪೇಟೆ ಮತ್ತು ಮಡಿಕೇರಿ ಇಲ್ಲಿಗೆ ಸಲ್ಲಿಸುವದು. ವಿದ್ಯಾಸಿರಿ ಸಹಾಯಧನವನ್ನು ಅನುದಾನ ಲಭ್ಯತೆಗೆ ಅನುಸಾರವಾಗಿ ಮಂಜೂರು ಮಾಡಲಾಗುವದು.

ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂ.ಸಂ.08272-220214 ನ್ನು ಸಂಪರ್ಕಿಸಬಹುದು.