ಮಡಿಕೇರಿ, ಸೆ. 14 : ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರ ಅಧ್ಯಕ್ಷತೆಯಲ್ಲಿ ತಾ.16 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ಶೇಷಾದ್ರಿಪುರದ ಜೆಪಿ ಭವನದಲ್ಲಿ ನಡೆಯಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ. ತಾ. 17 ರಂದು ಸಭೆ ನಿಗದಿಯಾಗಿತ್ತಾದರೂ, ಕಾರಣಾಂತರ ಗಳಿಂದ ಒಂದು ದಿನ ಮುಂಚಿತವಾಗಿ ಸಭೆ ನಡೆಯಲಿದ್ದು, ಜೆಡಿಎಸ್‍ನ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಮಾಜಿ ಪ್ರತಿನಿಧಿಗಳು, ಪದಾಧಿಕಾರಿಗಳು, ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.