ಸಿದ್ದಾಪುರ, ಸೆ.15: ಕಾಡಾನೆಗಳ ಹಿಂಡು ಕಾಫಿ ತೋಟವೊಂದರಲ್ಲಿ ದಾಂಧಲೆ ನಡೆಸಿದ ಪರಿಣಾಮ ಲಕ್ಷಾಂತರ ರೂಪಾಯಿಯ ಸಾಮಗ್ರಿಗಳು ನಷ್ಟಗೊಂಡಿರುವ ಘಟನೆ ಸಿದ್ದಾಪುರದ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ ರೈತಸಂಘ ದೇವಣಿರ ಬೋಪಣ್ಣ ಎಂಬವರ ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು ದಾಂಧಲೆ ನಡೆಸಿ ಕಾಫಿ ತೋಟದಲ್ಲಿ ಸ್ಪಿಂಕ್ಲರ್ ಪೈಪ್‍ಗಳನ್ನು ತುಳಿದು ಮನಬಂದಂತೆ ಹಾನಿಗೊಳಿಸಿವೆ.

ಅಲ್ಲದೆ ಕಾಫಿ ಗಿಡಗಳನ್ನು ಧ್ವಂಸಗೊಳಿಸಿವೆ ಇದರಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಕಾಡಾನೆಗಳ ಹಿಂಡು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ಇದರಿಂದಾಗಿ ಭಯದ ವಾತಾವರಣ ಮೂಡಿದೆ ಕಾರ್ಮಿಕರು ಕೆಲಸಕ್ಕೆ ಬರಲು ಹಿಂದೇಟು ಹಾಕುತಿದ್ದಾರೆ ಅರಣ್ಯ ಇಲಾಖೆಯು ಕಾಡಾನೆಗಳನ್ನು ಒಂದು ತೋಟದಿಂದ ಇನ್ನೊಂದು ತೋಟಕ್ಕೆ ಓಡಿಸುವದರಿಂದ ಯಾವದೇ ಪ್ರಯೋಜನವಾಗುತ್ತಿಲ್ಲ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಶಾಶ್ವತ ಯೋಜನೆಯನ್ನು ರೂಪಿಸಬೇಕೆಂದು ಬೋಪಣ್ಣ ಒತ್ತ್ತಾಯಿಸಿದ್ದಾರೆ.