ಮಡಿಕೇರಿ, ಸೆ. 24: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅ. 4 ರಂದು ಕಾಲೇಜು ವಿದ್ಯಾರ್ಥಿಗಳಿಗಾಗಿ ಡಾ. ಎಂ.ಎಂ. ಚಂಗಪ್ಪ ಜ್ಞಾಪಕಾರ್ಥ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬಹುದು.

ಪ್ರತಿ ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳಿಗೆ ಭಾಗವಹಿಸುವ ಅವಕಾಶವಿದ್ದು, ಭಾಗವಹಿಸುವ ವಿದ್ಯಾರ್ಥಿಗಳಿಗೆ ಒಂದು ಕಡೆಯ ಪ್ರಯಾಣ ವೆಚ್ಚ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗುವದು. ಬೆಳಿಗ್ಗೆ 9.45 ಕ್ಕೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ವಿಜೇತರಿಗೆ ರೋಲಿಂಗ್ ಟ್ರೋಫಿ ಹಾಗೂ ನಗದು ಬಹುಮಾನ ನೀಡಲಾಗುವದು. ಭಾಗವಹಿಸುವ ತಂಡಗಳು ತಾ. 30 ರೊಳಗೆ ಹೆಸರು ನೋಂದಾ ಯಿಸಿಕೊಳ್ಳುವಂತೆ ಪ್ರಾಂಶುಪಾಲ ಪ್ರೊ. ಕೆ.ವಿ. ಕುಸುಮಾಧರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9900579579 ಗೆ ಸಂಪರ್ಕಿಸುವದು.