ಮಡಿಕೇರಿ, ಸೆ. 30: ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 150ನೇ ಜನ್ಮ ದಿನಾಚರಣೆಯನ್ನು ತಾ. 2 ರಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಚರಿಸಲಾಗುವದು ಈ ಕಾರ್ಯಕ್ರಮಕ್ಕೆ ಮುನ್ನ ಡಿಸಿಸಿ ಪದಾಧಿಕಾರಿಗಳ ಸಭೆ, ನಂತರ 150ನೇ ಗಾಂಧಿ ಜಯಂತಿ ಆಚರಣೆ ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಮೆರವಣಿಗೆ ನಡೆಯಲಿದೆ.

ಮೆರವಣಿಗೆ ಕಾವೇರಿ ಹಾಲ್, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಹಳೆ ಖಾಸಗಿ ಬಸ್ ನಿಲ್ದಾಣ, ಚೌಕಿ ವೃತ್ತಕ್ಕಾಗಿ ಮುಖ್ಯ ರಸ್ತೆ ಜನರಲ್ ತಿಮ್ಮಯ್ಯ ವೃತ್ತಕ್ಕಾಗಿ ಗಾಂಧಿ ಮಂಟಪ ಸಭಾಂಗಣವನ್ನು ಸೇರಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ತಿಳಿಸಿದ್ದಾರೆ.