ಕೂಡಿಗೆ, ಅ. 1: ಕೂಡಿಗೆಯಲ್ಲಿರುವ ಪವಿತ್ರ ತಿರು ಕುಟುಂಬದ ಚರ್ಚ್‍ಗೆ ಕರ್ನಾಟಕ ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ರೂ. 1.50 ಲಕ್ಷ ವೆಚ್ಚದ ಕುಡಿಯುವ ನೀರಿನ ಫಿಲ್ಟರ್ ಅನ್ನು ನೀಡಿದೆ. ತಿರುಕುಟುಂಬದ ಚರ್ಚ್‍ನ ಮುಖ್ಯಸ್ಥರು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಎ. ಯಾಕುಬ್, ಉಪಾಧ್ಯಕ್ಷ ಖಾದರ್, ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಟಿ.ಪಿ. ಹಮೀದ್ ಪ್ರಯತ್ನದಿಂದ ಕರ್ನಾಟಕದ ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದೆ.