ಸೋಮವಾರಪೇಟೆ,ಸೆ.30: ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯಲ್ಲಿ ಆಯೋಜಿಸಿದ್ದ 2019ನೇ ಸಾಲಿನ ಭರತನಾಟ್ಯ ಪರೀಕ್ಷೆಯ ಜೂನಿಯರ್ ವಿಭಾಗದಲ್ಲಿ ಸೋಮವಾರಪೇಟೆಯ ಸಿ.ಪಿ. ಶ್ರೀಲಕ್ಷ್ಮಿ ತೃತೀಯ ಸ್ಥಾನ ಗಳಿಸಿದ್ದಾಳೆ.

ಕುಶಾಲನಗರದ ಜ್ಞಾನಗಂಗಾ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿರುವ ಶ್ರೀಲಕ್ಷ್ಮಿ ಕಳೆದ 6 ವರ್ಷಗಳಿಂದ ಸೋಮವಾರಪೇಟೆಯ ವಂಶಿ ಕಲಾಕ್ಷೇತ್ರದಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ಇವಳು ಸೋಮವಾರಪೇಟೆಯ ನೋಟರಿಯಾಗಿರುವ ಕೆ.ಎಸ್. ಪದ್ಮನಾಭ ಹಾಗೂ ಅಂಬೇಡ್ಕರ್ ವಸತಿ ಶಾಲೆಯ ವಿಜ್ಞಾನ ಶಿಕ್ಷಕಿ ಪುಷ್ಪಲತಾರವರ ಪುತ್ರಿ.