ಮಡಿಕೇರಿ, ಅ.13: ಮಹಾನ್ ಗ್ರಂಥ ಮಹಾಕಾವ್ಯ ರಾಮಾಯಣ ವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ. ಆ ದಿಸೆಯಲ್ಲಿ ಮಹರ್ಷಿ ವಾಲ್ಮೀಕಿ ಅವರ ಜೀವನ ಚರಿತ್ರೆ ಯನ್ನು ಪ್ರತಿಯೊಬ್ಬರೂ ತಿಳಿದು ಕೊಳ್ಳುವಂತಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಭಾನುವಾರ ನಡೆದ ‘ಮಹರ್ಷಿ ವಾಲ್ಮೀಕಿ ಜಯಂತಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮಾನವೀಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಮಹರ್ಷಿ ವಾಲ್ಮೀಕಿಯ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಓದಬೇಕು. ಮಹರ್ಷಿ ವಾಲ್ಮೀಕಿ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತಾಗಬೇಕು ಎಂದರು.

ಒಳ್ಳೆಯ ವಿಚಾರಗಳನ್ನು ಯೋಚಿಸಬೇಕು. ಕೆಟ್ಟ ಆಲೋಚನೆಗಳನ್ನು ಬಿಡಬೇಕು. ಸಮಾಜಕ್ಕೆ ಒಳ್ಳೆಯ ಕೊಡಗೆ ಕೊಡಲು ಪ್ರಯತ್ನಿಸಬೇಕು ಎಂದರು.

ಅರಕಲಗೂಡು ಬಿಜಿಎಸ್ ಕಾಲೇಜಿನ ಪ್ರಾಂಶುಪಾಲರಾದ ಎಚ್.ಬಿ.ಮಹೇಶ್ ಮಾತನಾಡಿ ಇಡೀ ವಿಶ್ವಕ್ಕೆ ರಾಮರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರದ್ದಾಗಿದೆ. ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರಮವಿದ್ದಲ್ಲಿ ಸಾಧನೆ ಮಾಡಬಹುದು ಎಂಬದನ್ನು ತೋರಿಸಿದ್ದಾರೆ ಎಂದರು.

ಶ್ರೀರಾಮನನ್ನು ಕುರಿತು ಇಡೀ ಬ್ರಹ್ಮಾಂಡವೇ ಮೆಚ್ಚಿಕೊಳ್ಳುವಂತಹ ರಾಮಾಯಣ ಒಂದು ಅದ್ಭುತ ಗ್ರಂಥವನ್ನು ವಾಲ್ಮೀಕಿ ರಚಿಸಿದರು. ಮಹರ್ಷಿ ವಾಲ್ಮೀಕಿ ರಾಮಾಯಣ ಪ್ರೇರಣೆಯಿಂದಾಗಿ ದೇಶದ ಅನೇಕ ಭಾಷೆಗಳಲ್ಲಿ ರಾಮಾಯಣ ಮಹಾಕಾವ್ಯ ರಚನೆಯಾಯಿತು ಎಂದು ಅವರು ತಿಳಿಸಿದರು.

ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಮಲ್ಲಪ್ಪ ಮಾತನಾಡಿ

(ಮೊದಲ ಪುಟದಿಂದ) ಮಾನವಕುಲಕ್ಕೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ಹಿಂದಿನ ಕಾಲದ ಆದರ್ಶ ಮಹನೀಯರ ಉತ್ತಮ ವಿಚಾರಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದರು.

ವಿದ್ಯಾರ್ಥಿ ನಿಲಯ ಹಾಗೂ ಆಶ್ರಮ ಶಾಲೆಗಳಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ನಿಂಗರಾಜು (ತಿತಿಮತಿ ಬಾಲಕರ ವಿದ್ಯಾನಿಲಯ), ಎಚ್.ಎಲ್.ರವಿ (ಬಸವನಹಳ್ಳಿ ಆಶ್ರಮ ಶಾಲೆ), ಶಶಿ (ಸಹ ಶಿಕ್ಷಕರು, ಬಸವನಹಳ್ಳಿ ಆಶ್ರಮ ಶಾಲೆ) ವಿ.ಎಸ್.ಪ್ರಶಾಂತ್ (ಸಹ ಶಿಕ್ಷಕರು, ಬೊಮ್ಮಡು ಆಶ್ರಮ ಶಾಲೆ), ಪ್ರಿಯಾ (ಯಲಕವನಾಡು ಹೊರ ಸಂಪನ್ಮೂಲ ಶಿಕ್ಷಕರು), ಸೀತಾಲಕ್ಷ್ಮೀ (ಅಡುಗೆಯವರು, ಮಾಲಂಬಿ ಆಶ್ರಮ ಶಾಲೆ), ರಾಧಕೃಷ್ಣ (ಅಡುಗೆ ಸಹಾಯಕರು, ಪೆರಾಜೆ ಬಾಲಕರ ನಿಲಯ) ಸರಸ್ವತಿ (ಅಡುಗೆ ಸಹಾಯಕರು ಕಾರ್ಮಾಡು ಬಾಲಕಿಯರ ವಿದ್ಯಾರ್ಥಿ ನಿಲಯ), ಪಿ.ಪಿ.ಮಹಾಬಲ (ಡಿ ದರ್ಜೆ ನೌಕರರು ಐಟಿಡಿಪಿ ಕಚೇರಿ) ಇವರಿಗೆ ಶಾಲು, ಪ್ರಶಸ್ತಿ ಪತ್ರ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಮಿತಾ ಬಿ.ಎಸ್., ಅಶ್ವಿತಾ ಪಿ.ಎನ್, ಕೀರ್ತನ ಬಿ.ಡಿ, ರಜಿತಾ ಜಿ.ಎಲ್., ಮೋನಿಷ ಪಿ.ಆರ್, ಹಾಗೂ ಭಾಗ್ಯವತಿ ಅವರನ್ನು ಗೌರವಿಸಲಾಯಿತು. ವಿದ್ಯಾರ್ಥಿ ನಿಲಯಗಳು ಮತ್ತು ವಿವಿಧ ಆಶ್ರಮ ಶಾಲೆಗಳಲ್ಲಿ ಸಾಂಸ್ಕøತಿಕ, ಪ್ರಬಂಧ, ಚಿತ್ರಕಲೆ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ತಹಶೀಲ್ದಾರ್ ಮಹೇಶ್ ಇತರರು ಇದ್ದರು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಸಿ.ಶಿವಕುಮಾರ್ ಸ್ವಾಗತಿಸಿದರು, ಐಟಿಡಿಪಿ ಇಲಾಖೆಯ ರಂಗನಾಥ್ ನಿರೂಪಿಸಿದರು, ಹರ್ಷಿತಾ ಮತ್ತು ತಂಡದವರು ಪ್ರಾರ್ಥಿಸಿದರು, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಿಕ್ಕಬಸವಯ್ಯ ವಂದಿಸಿದರು.