ಮಡಿಕೇರಿ, ಅ. 26 : ಜಿಲ್ಲಾ ಕೇಂದ್ರ ಮಡಿಕೇರಿ ನಗರದಂಚಿನ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ದೀಪಗಳ ಹಬ್ಬ ದೀಪಾವಳಿಯ ಪ್ರಯುಕ್ತ ತಾ.28ರಂದು ರಾತ್ರಿ ‘ಅಮಾವಾಸ್ಯೆ ದೀಪೆÀÇೀತ್ಸವ’ ನಡೆಯಲಿದೆ ಎಂದು ದೇವಾಲಯದ ಧರ್ಮದರ್ಶಿಗಳಾದ ಗೋವಿಂದ ಸ್ವಾಮಿ ತಿಳಿಸಿದ್ದಾರೆ.

ತಾ. 28 ರಂದು ರಾತ್ರಿ 7 ಗಂಟೆಗೆ ಕಳಸ ಪೂಜೆ, ರಾತ್ರಿ 8 ಗಂಟೆಗೆ ಅನ್ನದಾನ, ಪ್ರಸಾದ ವಿ&divound;ಯೋಗ ಹಾಗೂ ರಾತ್ರಿ 9 ಗಂಟೆಗೆ ತಾಯಿಯ ದರ್ಶನ ನಡೆಯಲಿದ್ದು, ರಾತ್ರಿ 9.30ಕ್ಕೆ ದೀಪೆÀÇೀತ್ಸವ ಪ್ರಾರಂಭವಾಗಲಿದೆ.

ದೀಪೆÀÇೀತ್ಸವ ದಿನದಂದು ನೈವೇದ್ಯ ಪ್ರಸಾದ, ಅನ್ನದಾನ, ದೇವಸ್ಥಾನದ ಹೂವಿನ ಅಲಂಕಾರ ಮತ್ತು ವಿದ್ಯುತ್ ದೀಪಾಂಕಾರಗಳನ್ನು ಮಾಡಲಿಚ್ಛಿಸುವವರು ಖುದ್ದಾಗಿ ದೇವಾಲಯದ ಆಡಳಿತ ಕಚೇರಿಯಲ್ಲಿ ವಿಚಾರಿಸುವಂತೆ ಮನವಿ ಮಾಡಿದ್ದಾರೆ.

ಅಂದು ಭಕ್ತಾದಿಗಳು ಗ್ರಹದೋಷ ಪರಿಹಾರಕ್ಕೋಸ್ಕರ 108 ಎಳ್ಳು ಬತ್ತಿಯನ್ನು ದೇವಸ್ಥಾನದ ಆವರಣದಲ್ಲಿ ಹಚ್ಚಿದರೆ ದೋಷ ಪರಿಹಾರವಾಗುವ ನಂಬಿಕೆ ಹಿಂದಿನಿಂದಲೂ ಇದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಳ್ಳುಬತ್ತಿಯನ್ನು ಹಚ್ಚುವ ಮೂಲಕ ದೀಪೋತ್ಸವ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ 08272 224668, 223313, 94807 30523 ನ್ನು ಸಂಪರ್ಕಿಸಬಹುದಾಗಿದೆ.