ಕೂಡಿಗೆ, ನ. 1: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಜಿಮ್ನಾಸ್ಟಿಕ್ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಜಿಮ್ನಾಸ್ಟಿಕ್ ವಿದ್ಯಾರ್ಥಿನಿಯರಾದ ಯು.ವಿ. ತೇಜಸ್ವಿನಿ ಮತ್ತು ಎಸ್. ನಯನ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಕ್ರೀಡಾಕೂಟ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆಯಲಿದೆ.
ಶಿವಮೊಗ್ಗದಲ್ಲಿ ಅ. 23 ರಿಂದ 25 ರವರೆಗೆ ನಡೆದ ರಾಜ್ಯಮಟ್ಟದ ಮೇಲಾಟಗಳಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾಪಟು ಸಿ.ಎಂ. ಶೈಲ 1500 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಮತ್ತು ಹರ್ಡಲ್ಸ್ನಲ್ಲಿ ಬೆಳ್ಳಿ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.