ಮಡಿಕೇರಿ, ನ. ೬: ಕೃಷಿಯನ್ನೇ ಪ್ರಧಾನ ವೃತ್ತಿಯನ್ನಾಗಿಸಿಕೊಂಡಿರುವ ಒಕ್ಕಲಿಗ ಸಮುದಾಯ ಇಂದು ಬೇರೆ ಬೇರೆ ಪ್ರಾಂತ್ಯಗಳಲ್ಲಿ ಭಾಷೆ, ಸಂಸ್ಕೃತಿ, ಆಚಾರ, ವಿಚಾರ ಸಂಪ್ರದಾಯಗಳ ಪ್ರಭಾವದಿಂದ ವಿವಿಧ ಹೆಸರುಗಳಿಂದ ಕರೆದುಕೊಂಡಿದ್ದಾರೆ. ಈ ನೂರಾರು ಪಂಗಡಗಳು ಮಲೆನಾಡು, ಬಯಲು ಸೀಮೆ, ಕೊಡಗು ಹಾಗೂ ದಕ್ಷಿಣ ಕನ್ನಡ ಭಾಗಗಳಲ್ಲಿ ಮುಖಂಡತ್ವವನ್ನು ವಹಿಸಿ ಗೌಡರೆಂದು ಖ್ಯಾತರಾಗಿರುವದನ್ನು ನಾವು ಕಾಣುತ್ತಿದ್ದೇವೆ. ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಒಂದಾಗಬೇಕೆAದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ನಿರ್ಮಲಾನಂದ ಸ್ವಾಮೀಜಿ ಕರೆ ನೀಡಿದರು.
ಬೆಂಗಳೂರಿನ ಕೊಡಗು ಗೌಡ ಸಮಾಜದ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಾಗೂ ಗೌಡ ಸಮಾಜದ ಕೊಠಡಿಗಳನ್ನು ಉದ್ಘಾಟಿಸಿ ಮಹಾ ಸ್ವಾಮೀಜಿಗಳು ಮಾತನಾಡಿದರು.
ಕೊಡಗಿನ ಹತ್ತು ಕುಟುಂಬ ಹದಿನೆಂಟು ಗೋತ್ರದ ಗೌಡ ಜನಾಂಗ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದೊಂದಿಗೆ ಅನನ್ಯ ಭಾವನೆ ಹೊಂದಿದೆ. ತಮ್ಮ ಮೂಲ ಬೇರುಗಳನ್ನು ನೆನೆಯುವ ಮೂಲಕ ಆಚಾರ, ವಿಚಾಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೊಡಗು ಗೌಡ ಸಮಾಜ ಕಾರ್ಯೋನ್ಮುಖ ವಾಗಬೇಕೆಂದು ಸ್ವಾಮೀಜಿ ಕರೆ ನೀಡಿದರು.
ದೇವರಗುಂಡ ಡಾಟಿ ಸದಾನಂದ ಗೌಡ ಮಾತನಾಡಿ, ಅರೆಭಾಷೆ ಗೌಡ ಜನಾಂಗದ ಸಂಸ್ಕೃತಿ, ಸಂಪ್ರದಾಯ, ಭಾಷೆ, ಪರಂಪರೆಗಳನ್ನು ಉಳಿಸಿ ಕೊಳ್ಳುವಲ್ಲಿ ನಮ್ಮ ಯುವ ಜನಾಂಗ ಉತ್ಸುಕವಾಗಿರುವದು ಹೆಮ್ಮೆಯ ವಿಚಾರವೆಂದರು.
ನಮ್ಮ ಮುಂದಿನ ಪೀಳಿಗೆಯವರಲ್ಲಿ ನಮ್ಮ ತನವನ್ನು ಉಳಿಸಿ ಕಾಪಾಡುವಲ್ಲಿ ತಾಯಂದಿರ ಪಾತ್ರ ಪ್ರಮುಖವಾಗಿದ್ದು, ಪೋಷಕರು ತಮ್ಮ ಮಕ್ಕಳಲ್ಲಿ ನಮ್ಮ ಭಾಷೆ, ಸಂಸ್ಕೃತಿ, ಆಚಾರ, ವಿಚಾರಗಳ ಬಗ್ಗೆ ಹೆಚ್ಚಿನ ಅರಿವು ನೀಡುವ ಕಾರ್ಯವಾಗಬೇಕೆಂದರು.
ಸುವರ್ಣ ಸಂಭ್ರಮದ ನೆನಪಿನ ಸಂಚಿಕೆ ‘ಸುರ್ವಣ ಸಮೃದ್ಧಿ’ ಮತ್ತು ಧ್ವನಿಸುರುಳಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಅರೆಭಾಷೆ ಅಕಾಡೆಮಿ ಸ್ಥಾಪನೆಯಾದ ನಂತರ ಕೊಡಗಿನ ಗೌಡ ಜನಾಂಗ ಭಾಷೆ, ಸಂಸ್ಕೃತಿ, ಪದ್ಧತಿ, ಪರಂಪರೆಗಳಿಗೆ ಮತ್ತಷ್ಟು ಪುಷ್ಟಿ ನೀಡುತ್ತಿರುವದನ್ನು ಕಾಣುತ್ತಿದ್ದೇವೆ. ಜನಾಂಗದ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಿಂದ ದೊರಕಬಹುದಾದ ಸವಲತ್ತುಗಳನ್ನು ಕೊಡಿಸಲು ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ಜನಾಂಗ ಅದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮಾತನಾಡಿ, ಗೌಡ ಜನಾಂಗದ ಅಭಿವೃದ್ಧಿ ಮತ್ತು ಸಮಸ್ಯೆಗಳ ಪರಿಹಾರಕ್ಕಾಗಿ ಗೌಡ ಸಮಾಜಗಳ ಒಕ್ಕೂಟ ಬೆನ್ನೆಲುಬಾಗಿ ನಿಂತಿರುತ್ತದೆ ಎಂದು ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷಿö್ಮನಾರಾಯಣ ಕಜೆಗದ್ದೆ ಮಾತನಾಡಿ, ಅರೆಭಾಷಿಕರ ಸಂಸ್ಕೃತಿ, ಆಚಾರ ವಿಚಾರಗಳನ್ನು ಬೆಳೆಸಲು ಅಕಾಡೆಮಿ ಬದ್ಧವಾಗಿದೆ. ಈಗಾಗಲೇ ಅರೆಭಾಷಿಕರ ಬಗ್ಗೆ ಪುಸ್ತಕಗಳು ಹೊರಬಂದಿವೆ, ಹಿರಿಯರ ಅನುಭವ ಮತ್ತು ಸಲಹೆಗಳನ್ನು ಪಡೆದು ಅರೆಭಾಷೆ ಅಕಾಡೆಮಿ ಉತ್ತಮ ಕಾರ್ಯ ಯೋಜನೆಗಳನ್ನು ಹಮ್ಮಿಕೊಳ್ಳಲಿದೆ ಎಂದರು.
ಸಮಾರAಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಂಗಳೂರು ಕೊಡಗು ಗೌಡ ಸಮಾಜದ ಅಧ್ಯಕ್ಷ ಅಮೆ ಸಿ. ಸೀತಾರಾಮ್ ಹಿರಿಯರ ಪ್ರಯತ್ನದಿಂದ ಬೆಂಗಳೂರಿನಲ್ಲಿ ನಮ್ಮ ಸಮಾಜ ಐವತ್ತು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಸುಸಜ್ಜಿತ ಭವನವನ್ನು ನಾವು ಹೊಂದಿದ್ದೇವೆ. ಮುಂದೆ ಜನಾಂಗದವರದ್ದೇ ಆದ ಸಹಕಾರ ಸಂಘವೊAದನ್ನು ಸ್ಥಾಪಿಸಿ ಆರ್ಥಿಕ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ಪ್ರಯತ್ನ ನಡೆಯಲಿದೆ. ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಧನ ಸಹಾಯ, ಅನಾರೋಗ್ಯ ಪೀಡಿತರಾದವರಿಗೆ ನೆರವು ಸೇರಿದಂತೆ ಅನೇಕ ಉತ್ತಮ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವದು ಎಂದರು.
ದಾನಿಗಳು ಹಾಗೂ ಸಮಾಜದ ಬಂಧುಗಳು ಅಗತ್ಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಲ್ಲದೇ ಸಮಾಜದ ಗಣ್ಯರನ್ನು ಹಾಗೂ ಅಧ್ಯಕ್ಷರುಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತ ರಾದವರಿಗೆ ಬಹುಮಾನ ವಿತರಿಸ ಲಾಯಿತು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಸಮಾಜದ ಪ್ರಧಾನ ಕಾರ್ಯದರ್ಶಿ ಚೊಕ್ಕಾಡಿರ ಎನ್. ಅಪ್ಪಯ್ಯ ಸ್ವಾಗತಿಸಿದರೆ, ಸಂಘದ ಕಾನೂನು ಸಲಹೆಗಾರ ನಿಡ್ಯಮಲೆ ಪ್ರಕಾಶ್ ವಂದಿಸಿದರು. ಪಟ್ಟಡ ಶಿವಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಬೆಂಗಳೂರು, ಮೈಸೂರು, ಕೊಡಗು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಗೌಡ ಜನಾಂಗ ಬಾಂಧವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.