ಮಡಿಕೇರಿ, ನ. 7: ಪ್ರಸಕ್ತ (2019-20) ಸಾಲಿನಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ ಪ್ರೌಢಶಾಲಾ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ನೇರ ಗುತ್ತಿಗೆ ಮೂಲಕ ಶಿಕ್ಷಕರನ್ನು ನೇಮಕಾತಿ ಮಾಡಲು ವಿಶೇಷ ಬಿಇಡಿ ವಿದ್ಯಾರ್ಹತೆ ಹೊಂದಿ ಆರ್ಸಿಐನಲ್ಲಿ ನೋಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಾ. 11 ರೊಳಗೆ ಅರ್ಜಿ ಸಲ್ಲಿಸುವಂತೆ ಸಮಗ್ರ ಶಿಕ್ಷಣ ಅಭಿಯಾನದ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ.