ಮಡಿಕೇರಿ ನ. 8 : ಕೇರಳದ ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ವತಿಯಿಂದ ನೀಡಲಾಗುವ ಗಡಿನಾಡು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಭಾಜನರಾಗಿದ್ದಾರೆ.

ಕನ್ನಡ ಸಾಹಿತ್ಯ, ಸಂಸ್ಕøತಿ, ಜಾನಪದ, ಸಮಾಜ ಸೇವೆ, ಮುಂತಾದ ರಂಗಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವದನ್ನು ಪರಿಗಣಿಸಿ ತಾ. 23 ರಂದು ಕಾಸರಗೋಡಿನ ಕ್ಯಾಪಿಟಲ್‍ಇನ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆಯಲಿರುವ ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವದು. ಕಾರ್ಯಕ್ರಮದಲ್ಲಿ ಕೇರಳದ, ಕರ್ನಾಟಕದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.