ವಿವಾದಿತ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಕುರಿತು 2010ರಲ್ಲಿ ಅಲಹಾಬಾದ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿ ಕುರಿತು ಸುಪ್ರೀಂ ಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಾಲಯದಲ್ಲಿ ಇಷ್ಟು ವರ್ಷಗಳ ಕಾಲ ನಡೆದ ಹೋರಾಟದ ಸುದೀರ್ಘ ವಿವರ ಇಲ್ಲಿದೆ.1528: ಮೊಘಲ್ ಸಾಮ್ರಾಟ್ ಬಾಬರನ ಕಮಾಂಡರ್ ಮಿರ್ ಬಾಕಿಯಿಂದ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ಮಾಣ.

1885: ಅಯೋಧ್ಯೆಯ ಸಂತ ಮಹಂತ್ ರಘುವೀರ್ ದಾಸ್ ಫೈಜಾಬಾದ್ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮಸೀದಿಯ ಪಕ್ಕದಲ್ಲಿ ಗೋಪುರ ನಿರ್ಮಾಣಕ್ಕೆ ಮನವಿ ಅರ್ಜಿ ತಿರಸ್ಕøತ.1859: ವಿವಾದಿತ ಸ್ಥಳವನ್ನು ಹಿಂದೂ-ಮುಸ್ಲಿಂರಿಗೆ ಹಂಚಿಕೆ ಮಾಡಿ ಪ್ರಾರ್ಥನೆ ಹಾಗೂ ದೇವಾರಾಧನೆಗೆ ಅವಕಾಶ ಮಾಡಿಕೊಟ್ಟ ಬ್ರಿಟಿಷ್ ಸರಕಾರ.1949: ವಿವಾದಿತ ಸ್ಥಳದಲ್ಲಿ ಮಸೀದಿಯ ಕೇಂದ್ರ ಗುಮ್ಮಟದೊಳಗೆ ರಾಮಲಲ್ಲಾನ ವಿಗ್ರಹಗಳ ಪ್ರತಿಷ್ಠಾಪನೆ. ಪೂಜೆ, ಭಜನೆ.

1950: ಗೋಪಾಲ್ ಸಿಮ್ಲಾ ವಿಶಾರದ್ ಮತ್ತು ಪರಮಹಂಸ ರಾಮಚಂದ್ರ ದಾಸ್ ಫೈಜಾಬಾದ್ ಕೋರ್ಟ್‍ನಲ್ಲಿ ಎರಡು ದಾವೆ ಸಲ್ಲಿಸಿ ವಿವಾದಿತ ಸ್ಥಳದಲ್ಲಿ ಮೂರ್ತಿ ಆರಾಧನೆಗೆ ಅನುಮತಿ ಕೋರಿ ಮನವಿ ಸಲ್ಲಿಕೆ.

1959: ವಿವಾದಿತ ಜಾಗದ ಸ್ವಾಧೀನ ಹಾಗೂ ನಿರ್ಮೋಹಿ ಅಖಾಡದಿಂದ ಪೂಜೆಗಾಗಿ ಅರ್ಜಿ ಸಲ್ಲಿಕೆ.

1961: ವಿವಾದಿತ ಸ್ಥಳ ನಮ್ಮದು ಎಂದು ನ್ಯಾಯಾಲಯದ ಮೊರೆ ಹೋದ ಸುನ್ನಿ ವಕ್ಛ್ ಮಂಡಳಿ.

1981: ಉತ್ತರ ಪ್ರದೇಶದ ಸುನ್ನಿ ಕೇಂದ್ರ ವಕ್ಛ್ ಬೋರ್ಡ್ ಸ್ಥಳದ ಸ್ವಾಧೀನ ಕೋರಿ ಅರ್ಜಿ. ಮಸೀದಿಯಿಂದ ಮೂರ್ತಿ ತೆಗೆಯುವಂತೆ ಮನವಿ.

1984: ಅಯೋಧ್ಯೆಯ ಸಂತ ಪರಮ ಹಂಸ ರಾಮಚಂದ್ರ ದಾಸ್ ಉಡುಪಿ ಪೇಜಾವರ ಶ್ರೀಗಳ ನೇತೃತ್ವದಲ್ಲಿ ‘ತಾಲಾಕೋಲೋ’ ಆಂದೋಲನ. ಬೀಗ ತೆಗೆಯದಿದ್ದರೆ ಸಂತರಿಂದ ಬಲಿದಾನದ ಘೋಷಣೆ.

1986: ವಿವಾದಗ್ರಸ್ತ ಜಾಗದಲ್ಲಿ ಹಿಂದೂಗಳ ಪೂಜೆಗೆ ಅನುವು ಮಾಡಿಕೊಡುವಂತೆ ಸ್ಥಳೀಯ ನ್ಯಾಯಾಲಯ ಆದೇಶ.

(ಮೊದಲ ಪುಟದಿಂದ) 1989: ವಿವಾದಗ್ರಸ್ತ ಜಾಗದ ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಅಲಾಹಾಬಾದ್ ಹೈಕೋರ್ಟ್ ಆದೇಶ. ವಿವಾದಾಸ್ಪದ ಜಾಗದಲ್ಲಿ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ. ದೇಶದೆಲ್ಲೆಡೆಯಿಂದ ರಾಮಶಿಲೆ (ಇಟ್ಟಿಗೆ) ಸಂಗ್ರಹ.

ಆದೇಶ 1990: ವಿವಾದಿತ ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಲಾಲ್ ಕೃಷ್ಣ ಅದ್ವಾಣಿ ನೇತೃತ್ವದಲ್ಲಿ ಗುಜರಾತಿನ ಸೋಮನಾಥದಿಂದ ಅಯೋಧ್ಯೆಯತ್ತ ರಥಯಾತ್ರೆ. ಅದೇ ವರ್ಷ ಅಕ್ಟೋಬರ್ 30 ರಂದು ಅಯೋಧ್ಯೆಯಲ್ಲಿ ಕಾರ ಸೇವೆ. ವಿವಾದಾಸ್ಪದ ಕಟ್ಟಡದ ಮೇಲೆ ಭಗವಾಧ್ವಜ ಹಾರಾಟ. ನ. 2 ರಂದು 78 ರಾಮಭಕ್ತರು ಗೋಲಿಬಾರ್‍ನಿಂದ ಬಲಿದಾನ.

1992: ಡಿ. 6 ಬಾಬ್ರಿ ಮಸೀದಿ ಧ್ವಂಸ. ಅಯೋಧ್ಯೆಯಲ್ಲಿ ತಾತ್ಕಾಲಿಕ ಮಂದಿರ ನಿರ್ಮಾಣ.

1993: ವಿವಾದಿತ ಜಾಗವನ್ನು ಕೇಂದ್ರ ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಘೋಷಣೆ. ಅಯೋಧ್ಯೆ ನಿರ್ದಿಷ್ಟ ಪ್ರದೇಶದ ಸ್ವಾಧೀನ. ಕಾಯಿದೆ ಅಂಗೀಕಾರ. ಇದಕ್ಕೆ ಇಸ್ಮಾಯಿಲ್ ಫಾರೂಕಿ ಸೇರಿದಂತೆ ಹಲವರಿಂದ ತಕರಾರು ಅರ್ಜಿ.

2002: ಜಾಗದ ಒಡೆತನ ಯಾರಿಗೆ ಸೇರಿದ್ದು ಎನ್ನುವ ವ್ಯಾಜ್ಯ ಕುರಿತು ಅಲಹಾಬಾದ್ ಹೈಕೋರ್ಟ್ ವಿಚಾರಣೆ ಆರಂಭ.

2003: ಅಯೋಧ್ಯಾ ಮಂದಿರ ನಿರ್ಮಾಣ ಸಂಕಲ್ಪದೊಂದಿಗೆ ಶಿಲಾದಾನ ಆಂದೋಲನ.

2010: ಸುನ್ನಿ ವಕ್ಛ್ ಮಂಡಳಿ ನಿರ್ಮೋಹಿ ಅಖಾಡ ಮತ್ತು ರಾಮ್‍ಲಲ್ಲಾ ಮೂರೂ ವಾರಸುದಾರರಿಗೆ ವಿವಾದಿತ ಜಾಗದ ಸಮಾನ ಹಂಚಿಕೆ ಮಾಡಿ ಅಲಹಾಬಾದ್ ಹೈಕೋರ್ಟ್ ತೀರ್ಪು.

2011: ಅಯೋಧ್ಯೆ ಭೂ ವಿವಾದ ಕುರಿತ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ. ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ. ವಿವಾದಿತ ಜಾಗದಲ್ಲಿ ಭಾರತೀಯ ಪುರಾತತ್ವ ಇಲಾಖೆಯಿಂದ ಉತ್ಖಲನ.

2017: ಪರಸ್ಪರ ಸಂಧಾನ ಸಮ್ಮತಿ ಮೂಲಕ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಲು ಸಿಜೆಐ ಜೆ.ಎಸ್. ಖೇಹರ್ ಸಲಹೆ. ಸಂಧಾನಕ್ಕೆ ಉಭಯ ಕಡೆ ಸದಸ್ಯರ ಸಮಿತಿ ನೇಮಕ.

2017: ಅಲಹಾಬಾದ್ ಹೈಕೋರ್ಟ್‍ನ 1994ರ ತೀರ್ಪಿನ ವಿರುದ್ಧ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ತ್ರಿಸದಸ್ಯ ಪೀಠ ರಚನೆ.

2018: ತನ್ನ 1994ರ ತೀರ್ಪಿನ ಮರು ಪರಿಶೀಲನೆ ಕೋರಿದ ಅರ್ಜಿಗಳ ವಿಚಾರಣೆಯನ್ನು 5 ಸದಸ್ಯರ ವಿಸ್ತøತ ಪೀಠಕ್ಕೆ ಒಪ್ಪಿಸಲು ಕೋರಿ ರಾಜೀವ್ ಧವನ್ ಅವರಿಂದ ಅರ್ಜಿ.

2019: ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದ ಸಂಧಾನ ಸಮಿತಿಯ ಯತ್ನ ವಿಫಲ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠದಿಂದ ನಲವತ್ತು ದಿನಗಳ ಕಾಲ ವಿಚಾರಣೆ.

ಇಂದು ಅಂತಿಮ ತೀರ್ಪು

2019: ನವೆಂಬರ್ 9- ಅಯೋಧ್ಯೆ ಅಂತಿಮ ತೀರ್ಪು ಪ್ರಕಟ. ವಿವಾದಿತ ಭೂಮಿ ರಾಮಲಲ್ಲಾ ಪಾಲು. ರಾಮ ಮಂದಿರ ನಿರ್ಮಾಣಕ್ಕೆ ಅನುಮತಿ.