ಮಡಿಕೇರಿ, ನ.10 : ಭಾರತೀಯ ರಿಸರ್ವ್ ಬ್ಯಾಂಕ್, ಬೆಂಗಳೂರಿನ ಬ್ಯಾಂಕಿಂಗ್ ಓಂಬುಡ್ಸ್ಮನ್ ವಿಭಾಗವು ಒಂದು ದಿನದ ಕಾರ್ಯಾಗಾರ ಸಾರ್ವಜನಿಕರಿಗಾಗಿ ನಡೆಸಲು ಆಯೋಜಿಸಿದ್ದು, ತಾ. 11 ರಂದು (ಇಂದು) ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಬ್ಯಾಂಕಿಂಗ್ ಓಂಬುಡ್ಸ್ಮನ್ ಬಗ್ಗೆ ಜಾಗೃತಿ ಮೂಡಿಸಲು ಬ್ಯಾಂಕಿಂಗ್ ಓಂಬುಡ್ಸ್ಮನ್ ಸ್ಕೀಮ್ 2006, ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗಾಗಿ ಮತ್ತು ಡಿಜಿಟಲ್ ವಹಿವಾಟುಗಳಿಗಾಗಿ ಕಾರ್ಯಾಗಾರ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಬ್ಯಾಂಕ್ ಗ್ರಾಹಕರು, ವಿದ್ಯಾರ್ಥಿಗಳು, ಸ್ವಸಹಾಯ ಗುಂಪುಗಳು, ಮಹಿಳೆಯರು ಭಾಗವಹಿಸಲು ಕೋರಿದೆ.