ಮಡಿಕೇರಿ, ಡಿ. 4: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ರಾಷ್ಟ್ರೀಯ ಆಯುಷ್ ಅಭಿಯಾನದಡಿ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಶಿಬಿರ ತಾ. 6 ರಿಂದ 9 ರವರೆಗೆ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆಯಲಿದೆ.ತಾ. 6 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಜಿಲ್ಲಾ-ತಾಲೂಕು ಮಟ್ಟದ ಶಿಬಿರ(ಮೊದಲ ಪುಟದಿಂದ) ಉದ್ಘಾಟನಾ ಸಮಾರಂಭ ನಡೆಯಲಿದೆ. ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್. ಭೋಜೇಗೌಡ, ಆಯನೂರು ಮಂಜುನಾಥ, ಸಂಸದ ಪ್ರತಾಪ್ ಸಿಂಹ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಆಯುಷ್ ನಿರ್ದೇಶನಾಲಯದ ಆಯುಕ್ತೆ ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ., ಜಿ.ಪಂ. ಸಿಇಒ ಕೆ. ಲಕ್ಷ್ಮೀಪ್ರಿಯ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಹೆಚ್. ರಾಮಚಂದ್ರ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.