ಮಡಿಕೇರಿ, ಡಿ. 5: ಪ್ರಸಕ್ತ (2019-20) ಸಾಲಿನಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಗುರುಶಿಷ್ಯ ಪರಂಪರೆಯಡಿ ಕಲಿಕೆಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ನವೆಂಬರ್ 4ರ ಸರ್ವ ಸದಸ್ಯರ ಸಭೆಯಲ್ಲಿ ತೀರ್ಮಾನಿಸಿದಂತೆ ಈ ಯೋಜನೆ ಯನ್ನು ಕೈಬಿಡಲಾಗಿದ್ದು, ಇದೀಗ ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಶಿಷ್ಯವೇತನ ಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷದೊಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 10 ಸಾವಿರಗಳನ್ನು ಶಿಷ್ಯವೇತನವಾಗಿ ನೀಡಲಾಗುವದು. ಅರ್ಜಿಗಳನ್ನು ಅಕಾಡೆಮಿಯ ಕಚೇರಿ ವೇಳೆಯಲ್ಲಿ ಉಚಿತವಾಗಿ ಪಡೆಯಬಹುದು. ಹಾಗೂ ಅಕಾಡೆಮಿ ಅಂರ್ತಜಾಲ ತಾಣ ತಿತಿತಿ. ಞಚಿಡಿಟಿಚಿಣಚಿಞಚಿ sಚಿಟಿgeeಣಚಿಟಿಡಿiಣಥಿಚಿ ಚಿಛಿಚಿಜemಥಿ. ಛಿom ಮೂಲಕ ಪಡೆದು ಸಲ್ಲಿಸಬಹುದು. ಬೇರೆ ಬೇರೆ ಜಿಲ್ಲೆಯ ಅಭ್ಯರ್ಥಿಗಳು ಆಯಾಯ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ಪಡೆಯಬಹುದು. ಅರ್ಜಿಯ ಜೊತೆ ಇತ್ತೀಚಿನ ಪಠ್ಯಕ್ರಮವನ್ನು ಸಹ ನೀಡಲಾಗಿದೆ. ಅಂಚೆ ಮೂಲಕ ಅರ್ಜಿ ಮತ್ತು ಪಠ್ಯಕ್ರಮ ಪಡೆಯಲಿಚ್ಛಿಸುವವರು ರೂ.10 ಸ್ಟಾಂಪ್ ಹಚ್ಚಿದ ಸ್ವವಿಳಾಸವುಳ್ಳ ಲಕೋಟೆಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇಲ್ಲಿಗೆ ಕಳುಹಿಸಿಕೊಡಬೇಕಾಗಿ ಕೋರಿದೆ. ಅರ್ಜಿ ಸಲ್ಲಿಸಲು ತಾ. 20 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ. ಅಂಗಡಿ ಅವರು ತಿಳಿಸಿದ್ದಾರೆ.