ಮಡಿಕೇರಿ, ಡಿ. 7: ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಸಾಮಾನ್ಯ ಮರಳನ್ನು ನ್ಯಾಯಾಲಯದ ಆದೇಶದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಶೀಲ್ದಾರರು, ಪೊಲೀಸ್ ಇಲಾಖೆಯ ಸಮ್ಮುಖದಲ್ಲಿ ತಾ. 17 ರಂದು ¨ಳಿಗ್ಗೆ 11 ಗಂಟೆಗೆ ಶ್ರೀಮಂಗಲ ಪೊಲೀಸ್ ಠಾಣಾ ಆವರಣದಲ್ಲಿ ಹರಾಜು ನಡೆಸಲಾಗುವದು. ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ : 08272-228523 ನ್ನು ಸಂಪರ್ಕಿಸಬಹುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಅವರು ತಿಳಿಸಿದ್ದಾರೆ.