ಮಡಿಕೇರಿ, ಡಿ.9: ಪ್ರತಿಯೊಬ್ಬರಿಗೂ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಆಯುಷ್ಮಾನ್ ಭಾರತ್ -ಆರೋಗ್ಯ ಕರ್ನಾಟಕ (ಎಬಿ-ಎಆರ್ಕೆ) ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 3.64 ಲಕ್ಷ ಮಂದಿಗೆ ಆಯುಷ್ಮಾನ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಕಾರ್ಡ್ ವಿತರಿಸಲಾಗಿದೆ. ಇದುವರೆಗೆ ಪಡೆದಿರುವ 3.64 ಲಕ್ಷ ಮಂದಿಯಲ್ಲಿ 4,362 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆ ಪಡೆದಿದ್ದಾರೆ. 3 ಸಾವಿರದಷ್ಟು ಕೊಡಗು ಜಿಲ್ಲೆಯಲ್ಲಿ ಆರೋಗ್ಯ ಸೇವೆ ಪಡೆದಿದ್ದಾರೆ. ಇವರಲ್ಲಿ 900 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಶೇ.55 ರಷ್ಟು ಕಾರ್ಡ್ ವಿತರಿಸಿ ಇಡೀ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವದು ವಿಶೇಷವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ತಿಳಿಸಿದ್ದಾರೆ.(ಮೊದಲ ಪುಟದಿಂದ) ರಾಜ್ಯದ ಎಲ್ಲ ನಿವಾಸಿಗಳಿಗೆ ‘’ಆರೋಗ್ಯ ಕರ್ನಾಟಕ’’ ಎಂಬ ಸಾರ್ವತ್ರಿಕ ಆರೋಗ್ಯ ರಕ್ಷಣಾ ಯೋಜನೆಯಡಿ ಸರ್ಕಾರವು 2018ರ ಮಾರ್ಚ್ 2 ರಿಂದ ಅನುಷ್ಠಾನಗೊಳಿಸಿತ್ತು. ನಂತರ ಭಾರತ ಸರ್ಕಾರವು ‘’ಆಯುಷ್ಮಾನ್ ಭಾರತ್’’ ಯೋಜನೆಯನ್ನು ಜಾರಿಗೊಳಿಸಿದೆ.
ಈ ಯೋಜನೆಯಡಿಯಲ್ಲಿ ರಾಜ್ಯದ 115 ಲಕ್ಷ ಬಿಪಿಎಲ್ ಕುಟುಂಬಗಳ ಪೈಕಿ 62 ಲಕ್ಷ ಕುಟುಂಬಗಳಿಗೆ (ಆರ್ಎಸ್ಬಿವೈ ನೋಂದಾಯಿತ) ಕೇಂದ್ರ ಸರ್ಕಾರವು ಶೇ.60 ರಷ್ಟು ಅನುದಾನ ಭರಿಸುತ್ತದೆ. ರಾಜ್ಯ ಸರ್ಕಾರವು ಶೇ.40 ರಷ್ಟು ಅನುದಾನ ಭರಿಸುತ್ತದೆ. ಇನ್ನುಳಿದ 53 ಲಕ್ಷ ಕುಟುಂಬಗಳಿಗೆ ರಾಜ್ಯ ಸರ್ಕಾರವೇ ಶೇ.100 ರಷ್ಟು ವೆಚ್ಚ ಭರಿಸುತ್ತದೆ ಮತ್ತು ಸಾಮಾನ್ಯ ವರ್ಗದ 19 ಲಕ್ಷ ಕುಟುಂಬಗಳಿಗೂ ಸಹ ರಾಜ್ಯ ಸರ್ಕಾರವೇ ಶೇ.100 ರಷ್ಟು ಅನುದಾನ ಭರಿಸುತ್ತದೆ.
ಬಿಪಿಎಲ್ ಪಡಿತರ ಕಾರ್ಡು ಹೊಂದಿರುವವರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ.5 ಲಕ್ಷ ವರೆಗೆ ಉಚಿತ ಚಿಕಿತ್ಸೆ ಲಭ್ಯವಾಗುತ್ತದೆ. ಎಪಿಎಲ್ ಕಾರ್ಡುದಾರರು ಅಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇ.30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ 1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.
ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯ ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ, ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸೆಗಳು ಮತ್ತು 36 ಉಪ ಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಲಭ್ಯ, 169 ತುರ್ತು ಚಿಕಿತ್ಸೆಗಳಿಗೆ ಯಾವದೇ ಶಿಫಾರಸು ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು, ವಿವರಗಳಿಗಾಗಿ ವೆಬ್ಸೈಟ್ ತಿತಿತಿ.sಚಿsಣ.gov.iಟಿ/home ನೋಡಬಹುದು.
ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ನೀಡಲಾಗುತ್ತದೆ. ರೆಫೆರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫೆರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಅಡಿಯಲ್ಲಿ ಎಬಿಎಆರ್ಕೆ ಕಾರ್ಡ್ನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ರೂ.10 ಶುಲ್ಕದೊಂದಿಗೆ ನೀಡಲಾಗುತ್ತದೆ. ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ರೂ.35 ಶುಲ್ಕದೊಂದಿಗೆ ಎಬಿಎಆರ್ಕೆ ಕಾರ್ಡ್ ನೀಡಲಾಗುತ್ತದೆ. ಆಧಾರ್ ಕಾರ್ಡ್ ಮತ್ತು ಪಡಿತರ ಕಾರ್ಡ್ ಹಾಜರುಪಡಿಸಿ ಆರೋಗ್ಯ ಕಾರ್ಡ್ ಪಡೆಯಬಹುದು. ಟೋಲ್ ಫ್ರೀ ಸಂಖ್ಯೆ 1800 425 8330 ಗೆ ಕರೆ ಮಾಡಿ ತಿಳಿದುಕೊಳ್ಳಬಹುದು ಹಾಗೂ ಸಂಬಂಧಿಸಿದ ಆಸ್ಪತ್ರೆಯ ಆರೋಗ್ಯ ಮಿತ್ರರ ಮೊಬೈಲ್ ಸಂಖ್ಯೆ ಪಡೆದುಕೊಂಡು ಅವರನ್ನು ಸಂಪರ್ಕಿಸಬಹುದು. ವೆಬ್ಸೈಟ್ ತಿತಿತಿ.sಚಿsಣ.gov.iಟಿ/home ತಿತಿತಿ.ಚಿಡಿogಥಿಚಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ನೋಡಬಹುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಕಟಿಸಿರುವ ಸಮೀಪದ ನೋಂದಾಯಿತ ಆಸ್ಪತ್ರೆಗಳ ಪಟ್ಟಿಯನ್ನು ನೋಡಬಹುದು. ಸೌಲಭ್ಯ ಹಾಗೂ ಮಾಹಿತಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆ ತಾಲೂಕು ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು, ಆರೋಗ್ಯ ಸಹಾಯವಾಣಿ 104 ಟೋಲ್ಫ್ರಿ ಸಂಖ್ಯೆ :1800 4258330, ವೆಬ್ಸೈಟ್ ತಿತಿತಿ.sಚಿsಣ.gov.iಟಿ/home ತಿತಿತಿ.ಚಿಡಿogಥಿಚಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಬಹುದು.
ಜ್ಯೋತಿ ಸಂಜೀವಿನಿ ಸಂಯೋಜನೆಯು ರಾಜ್ಯ ಸರ್ಕಾರಿ ನೌಕರರು ಮತ್ತು ಕುಟುಂಬದವರಿಗೆ ಹೆಚ್ಚುವರಿ ಚಿಕಿತ್ಸೆ ದೊರೆಯಲು ಅನುಕೂಲವಾಗುವಂತೆ ‘ಜ್ಯೋತಿ ಸಂಜೀವಿನಿ’ ಯೋಜನೆಯನ್ನು ‘ಆಯುಷ್ಮಾನ್ ಭಾರತ’ ಯೋಜನೆಯಡಿ ಸಂಯೋಜಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶ ಹೊರಡಿಸಿ ಗಂಭೀರ ಹಾಗೂ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾದ ರಾಜ್ಯ ನೌಕರರು ಹಾಗೂ ಅವರ ಕುಟುಂಬ ಸದಸ್ಯರಿಗೆ ನೋಂದಾಯಿತ ಸೂಪರ್ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ನಗದು ರಹಿತ ತೃತೀಯ ಹಂತದ ಆರೋಗ್ಯ ಸೇವೆಯು ಇದರಡಿ ಲಭಿಸುತ್ತದೆ. ಈವರೆಗೂ ಜ್ಯೋತಿ ಸಂಜೀವಿನಿ ಯೋಜನೆಯಡಿ ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ಸುಟ್ಟಗಾಯ, ಗಂಭೀರ ಸ್ವರೂಪದ ಅಪಘಾತ ಮತ್ತು ಚಿಕ್ಕ ಮಕ್ಕಳ ಕಾಯಿಲೆಗಳಿಗೆ ಸಂಬಂಧಿಸಿ ಒಟ್ಟು ಏಳು ಬಗೆಯ ಮಾರಣಾಂತಿಕ ಕಾಯಿಲೆಗಳಿಗೆ ಸಂಬಂಧಿಸಿದಂತೆ 450 ಚಿಕಿತ್ಸಾ ವಿಧಾನ ಹಾಗೂ 50 ಮುಂದುವರಿದ ಚಿಕಿತ್ಸಾ ಸೌಲಭ್ಯಗಳು ನಗದು ರಹಿತವಾಗಿ ದೊರೆಯುತ್ತಿದೆ. ಈ ಯೋಜನೆಯಲ್ಲಿ ಕೊಡಗು ವೈದ್ಯಕಿಯ ಕಾಲೇಜು ರಾಜ್ಯದಲ್ಲಿ 11 ನೇ ಸ್ಥಾನದಲ್ಲಿದೆ.