ಮಡಿಕೇರಿ, ಡಿ.13: ಕಾರ್ಯನಿರ್ವಾಹಕ ಎಂಜಿನಿಯರ್, ಸೆಸ್ಕ್. ಚಾ.ವಿ.ಸ.ನಿ.,ನಿ ಇವರ ಅಧ್ಯಕ್ಷತೆಯಲ್ಲಿ ಗೋಣಿಕೊಪ್ಪಲು ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ತಾ. 16 ರಂದು ಬೆಳಗ್ಗೆ 11 ಗಂಟೆಯಿಂದ 12.30 ಗಂಟೆವರೆಗೆ ಗೋಣಿಕೊಪ್ಪಲು ಉಪ ವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.

ಕಾರ್ಯನಿರ್ವಾಹಕ ಎಂಜಿನಿಯರ್, ಸೆಸ್ಕ್. ಚಾವಿಸನಿ. ಇವರ ಅಧ್ಯಕ್ಷತೆಯಲ್ಲಿ ಮಡಿಕೇರಿ ಉಪ ವಿಭಾಗದ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆಯು ತಾ. 16 ರಂದು ಬೆಳಗ್ಗೆ 2.30 ಗಂಟೆಯಿಂದ 4 ಗಂಟೆವರೆಗೆ ವೀರಾಜಪೇಟೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.

ಗೋಣಿಕೊಪ್ಪಲು ಹಾಗೂ ವೀರಾಜಪೇಟೆ ವ್ಯಾಪ್ತಿಯ ಸಾರ್ವಜನಿಕರು /ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಿ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಅವರು ಕೋರಿದ್ದಾರೆ.