ಒಬ್ಬ ಶ್ರೇಷ್ಠ ತಂದೆ ತನ್ನ ಮಗ ಅಥವಾ ಮಗಳನ್ನು ಶಾಲೆಗೆ ಸೇರಿಸು ವಾಗ ಶಿಕ್ಷಕರೊಂದಿಗೆ ಮಾಡಿಕೊಂಡ ವಿನಂತಿ ಹೀಗಿತ್ತು.

v ದಯವಿಟ್ಟು ನನ್ನ ಮಗನಿಗೆ ಅಂಕಗಳ ಹುಚ್ಚು ಹಿಡಿಸಬೇಡಿ.

v “ಒಂದು ಉನ್ನತ ಹುದ್ದೆ ಹಿಡಿಯುವುದಕ್ಕಾಗಿ ನೀನು ಓದಲಿಕ್ಕೆ ಬಂದಿದ್ದೀಯಾ ಎಂದು ದಯವಿಟ್ಟು ಹೇಳಿಕೊಡಬೇಡಿ.

v ಕೆಲಸ ಯಾವುದೇ ಇರಲಿ ಅದನ್ನು ಪ್ರಾಮಾಣಿಕವಾಗಿ ಖುಷಿಯಿಂದ, ಹೆಮ್ಮೆಯಿಂದ ನಿಷ್ಟೆಯಿಂದ ಮಾಡುವುದೇ ಶ್ರೇಷ್ಠ ಎಂಬುದನ್ನು ಹೇಳಿಕೊಡಿ.

v ಅವನಿ(ಳಿ)ಗೆ ಉತ್ತಮ ಪುಸ್ತಕಗಳ ಹುಚ್ಚು ಹಿಡಿಯುವಂತೆ ಮಾಡಿ, ಶಾಲೆಯ ಪುಸ್ತಕಗಳಷ್ಟೇ ನಮ್ಮ ಮಿತಿ ಎಂಬ ಭ್ರಮೆ ಹುಟ್ಟಿಸಬೇಡಿ.

v ಭಯದಲ್ಲಿ ನಡುಗುವ ಬದಲು ಖುಷಿಯಿಂದ ಶಿಸ್ತಿಗೆ ಒಡ್ಡಿಕೊಳ್ಳುವುದನ್ನು ಹೇಳಿಕೊಡಿ.

v ಅವನಿಗೆ ಬದುಕು ಕಲಿಸಿ, ಕಷ್ಟಗಳಲ್ಲಿ ಓಡಿ ಹೋಗುವ, ಸುಖ ಬಂದಾಗ ಕುಣಿದಾಡುವುದರ ಬದಲು ಸಮಚಿತ್ತತೆಯಿಂದ ಇರುವುದನ್ನು ಹೇಳಿಕೊಡಿ, ನೋವಿನಲ್ಲೂ ನಗುವುದನ್ನು ಕಲಿಸಿ.

v ಎಂದಿಗೂ ಜಾತಿಯ ವಿಷ ಬೀಜ ಮೊಳೆಯದಂತೆ ನೋಡಿಕೊಳ್ಳಿ.

v ಸಾಧ್ಯವಾದರೆ ಅವನಿಗೆ ಪ್ರಕೃತಿಯಲ್ಲಿ ಕಳೆದುಹೋಗುವದನ್ನು ಹೇಳಿಕೊಡಿ, ಸುರಿಯುವ ಮಳೆಯಲ್ಲಿ ನೆನೆಯುವ, ಚಿಟ್ಟೆಗಳ ಚಂದವನ್ನು ಆನಂದಿಸುವ, ಹಾರುವ ಪಕ್ಷಿಗಳನ್ನು ಎಣಿಸುವ, ಸಾಲಾಗಿ ನಡೆದುಕೊಂಡು ಹೋಗುವ ಇರುವೆಗಳನ್ನು ಹಿಂಬಾಲಿಸುವ, ಬೀಜ ಮೊಳೆಯುವುದನ್ನು ಕಾಯುವ ಕುತೂಹಲ ತುಂಬಿ. ಗಿಡ ನೆಡಲು ಪಣತೊಡುವ ಮನಸ್ಸು ಬರುವಂತೆ ಮಾಡಿ.

v ಅನ್ಯಾಯ ಮಾಡಿ ಗಳಿಸುವುದಕ್ಕಿಂತ, ಒಬ್ಬರಿಗೆ ನೋವು ಮಾಡಿ ಪಡೆಯುವುದಕ್ಕಿಂತ ಪ್ರಾಮಾಣಿಕತೆಯಿಂದ ಸಾಧಿಸಲು ತಿಳಿಸಿ.

v ಜೀವನ ತುಂಬಾ ಸುಂದರವಾಗಿದೆ ಎಂಬುದನ್ನು ಹೇಳಿಕೊಡಿ.

v ಪ್ರತಿ ಕ್ಷಣದಲ್ಲೂ ಖುಷಿಯಿದೆ ಎಂಬುದನ್ನು ಅವನು (ಳು) ತಿಳಿಯಲಿ.

v ಹೆಣ್ಣನ್ನು ಗೌರವಿಸುವ, ದೀನ ದುರ್ಬಲರನ್ನು, ವಯೋವೃದ್ಧರನ್ನು ನೋಡಿ ಮರುಗುವ ಗುಣ ಕಲಿಸಿ, ಕಷ್ಟದಲ್ಲಿ, ನೋವಿನಲ್ಲಿರುವವರ ಸಹಾಯಕ್ಕೆ ಧಾವಿಸುವ ಛಲ ಬರುವಂತೆ ಮಾಡಿ.

v ಫೇಲಾದರೂ ಪರವಾಗಿಲ್ಲ ಬದುಕಿನಲ್ಲಿ ಖುಷಿಯಾಗಿ ದುಡಿದು ಜೀವಿಸುವುದನ್ನು ಕಲಿಸಿ.

v ನಾನು ಅವನಲ್ಲಿ ಒಬ್ಬ ಡಾಕ್ಟರ್, ಎಂಜಿನಿಯರ್, ಉನ್ನತ ಅಧಿಕಾರಿಗಿಂತ ಒಳ್ಳೆಯ ಮನುಷ್ಯನಾಗಿ ಬಾಳುವದನ್ನು ಕಾಣ ಬಯಸುತ್ತೇನೆ.

v ಅವನಿಗೆ ಇಂಥ ಗುಣಗಳನ್ನು ರೂಢಿಸಿದರೆ ನಾನು ನಿಮಗೆ ಋಣಿ.

(ಸಂಗ್ರಹ)-ಅಸ್ತ್ರು