ಸಿದ್ದಾಪುರ, ಡಿ. 19: ಸಂತ್ರಸ್ತರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಒತ್ತುವರಿ ತೆರವುಗೊಳಿಸಲಾದ ಜಾಗಕ್ಕೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿ ಶೇಷ ಭೇಟಿ ನೀಡಿ ಪರಿಶೀಲಿಸಿದರು.

ಅಭ್ಯತ್‍ಮಂಗಲ ಗ್ರಾಮದಲ್ಲಿ ಒತ್ತುವರಿಯಾಗಿದ್ದ ಜಾಗವನ್ನು ಇತ್ತೀಚೆಗೆ ಜಿಲ್ಲಾಡಳಿತ ವಶಕ್ಕೆ ಪಡೆದುಕೊಂಡಿತ್ತು. ಸಂತ್ರಸ್ತರಿಗೆ ನಿವೇಶನ ಕಲ್ಪಿಸುವ ನಿಟ್ಟಿನಲ್ಲಿ ಕಾಫಿ ಗಿಡಗಳನ್ನು ತೆರವುಗೊಳಿಸಿದ್ದು, ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಈಗಾಗಲೇ ಮರಗಳ ಎಣಿಕೆ ಪ್ರಕ್ರಿಯೆ ಮುಗಿಸಿದ್ದು, ಇದೀಗ ನಿವೇಶನ ವಿಂಗಡಿಸುವ ನಿಟ್ಟಿನಲ್ಲಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭ ಸಹಾಯಕ ನಗರ ಯೋಜನಾಧಿಕಾರಿ ಸಂಜೀವ್, ನೆಲ್ಲಿಹುದಿಕೇರಿ ಗ್ರಾ.ಪಂ. ಪಿ.ಡಿ.ಓ. ಅನಿಲ್‍ಕುಮಾರ್ ಇದ್ದರು.