ಮಡಿಕೇರಿ, ಡಿ. 22: ಕೊಡಗು ಜಿಲ್ಲೆಯಾದ್ಯಂತ ವಿದ್ಯುತ್ ವಿತರಣೆಗೆ ನಿರ್ಮಿಸಿರುವ ಮಾರ್ಗಗಳ ಬಹುಭಾಗ ತೋಟಗಳಲ್ಲಿಯ ಮರ ಗಿಡಗಳ ಮಧ್ಯದಲ್ಲಿ ಹಾದು ಹೋಗಿದ್ದು, ಮರಗಳ ರೆಂಬೆ ಕೊಂಬೆಗಳ ಬೀಳುವಿಕೆಯಿಂದಾಗಿ ಕಂಬಗಳು ಬಾಗಿ, ತಂತಿಗಳು ಕೆಳಮಟ್ಟಕ್ಕಿಳಿದು ಇದರಿಂದಾಗಿ ವಿದ್ಯುತ್ ಆಘಾತಗಳಾಗುವ ಸಂಭವವಿದೆ.

ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಶಿಥಿಲ ಗೊಂಡಿರುವ ಕಂಬಗಳು ಕಂಡು ಬಂದರೆ ಸಂಬಂಧಪಟ್ಟ ಅಧಿಕಾರಿ ಗಳಿಗೆ ಸಾರ್ವಜನಿಕರು ದೂರು ನೀಡಲು ಕೋರಿದೆ. ತೋಟಗಳಲ್ಲಿ ಒಳ್ಳೆ ಮೆಣಸು ಕೀಳಲು ಮತ್ತು ಮರದ ಕೊಂಬೆ ಗಳನ್ನು ಕಡಿಯಲು ಅಲ್ಯೂಮಿನಿಯಂ ಏಣಿಗಳನ್ನು ಮತ್ತು ನೀರು ಹಾಯಿಸಲು ಅಲ್ಯೂಮಿನಿಯಂ ಸ್ಪ್ರಿಂಕ್ಲರ್ ಪೈಪ್‍ಗಳನ್ನು ಉಪಯೋಗಿಸುತ್ತಿದ್ದು, ಇವುಗಳು ವಿದ್ಯುತ್ ಮಾರ್ಗಕ್ಕೆ ತಾಗಿ ಆಗಿಂದಾಗ್ಗೆ ವಿದ್ಯುತ್ ಅಪಘಾತಗಳು ಸಂಭವಿ ಸುತ್ತಿದೆ. ಅದ್ದರಿಂದ, ಅಲ್ಯೂಮಿನಿ ಯಂ, ಕಬ್ಬಿಣದ ಏಣಿ ಬದಲು ಬಿದಿರು, ಫೈಬರ್ ಏಣಿಗಳನ್ನೆ ಉಪಯೋಗಿಸಿ ವಿದ್ಯುತ್ ಅಪಘಾತ ತಡೆಗಟ್ಟಲು ಇಲಾಖೆಯೊಂದಿಗೆ ಸಹಕರಿಸುವಂತೆ ಸಾರ್ವಜನಿಕರಲ್ಲಿ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಸೋಮಶೇಖರ್ ಅವರು ಕೋರಿದ್ದಾರೆ.