ನಾಪೆÇೀಕ್ಲು, ಡಿ. 24: ಪೌರತ್ವ ಕಾಯ್ದೆ ವಿರೋಧಿಸಿ ನಾಪೆÇೀಕ್ಲು ಪಟ್ಟಣದಲ್ಲಿ ಮುಸ್ಲಿಂ ಭಾಂದವರು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಮುಚ್ಚುವದರ ಮೂಲಕ ಶಾಂತಿಯುತ ಬಂದ್ ನಡೆಸಿದರು.

ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸಾರ್ವಜನಿಕರ ಸಂಖ್ಯೆ ಕಡಿಮೆಯಾಗಿತ್ತು. ಸರಕಾರಿ, ಖಾಸಗಿ ಬಸ್‍ಗಳ ಮತ್ತು ವಾಹನಗಳ ಓಡಾಟ ಎಂದಿನಂತ್ತಿತ್ತು. ಯಾವದೇ ಅಹಿತಕರ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ. ನಾಪೆÇೀಕ್ಲು ಪೆÇಲೀಸ್ ಠಾಣಾಧಿಕಾರಿ ಆರ್.ಮಂಚಯ್ಯ ಅವರ ನೇತೃತ್ವದಲ್ಲಿ ಬಿಗಿ ಪೆÇಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.