ಶ್ರೀಮಂಗಲ, ಡಿ. 28: ವೀರಾಜಪೇಟೆ ತಾಲೂಕು ಕೃಷಿ ಇಲಾಖೆ ವತಿಯಿಂದ ಬಾಳೆಲೆ ಹೋಬಳಿ ಮಟ್ಟದ 2019-20ನೇ ಸಾಲಿನ ಕೃಷಿ ಅಭಿಯಾನ ಕಾರ್ಯಕ್ರಮ ಬೆಸಗೂರು ಗ್ರಾಮದ ಶ್ರೀ ಮಹದೇವರ ದೇವಸ್ಥಾನದ ಆವರಣದಲ್ಲಿ ತಾ. 30ರಂದು (ನಾಳೆ) ಪೂರ್ವಾಹ್ನ 10:30 ಗಂಟೆಗೆ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೊನ್ನಪ್ಪಸಂತೆ ಗ್ರಾ.ಪಂ. ಅಧ್ಯಕ್ಷೆ ಗುಲ್ಸಾದ್ ವಹಿಸಲಿದ್ದಾರೆ. ಜಿ.ಪಂ. ಸದಸ್ಯ ಬಾನಂಡ ಪ್ರತ್ಯು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೃಷಿ ವಿಜ್ಞಾನಿಗಳೊಂದಿಗೆ ಹೋಬಳಿ ವ್ಯಾಪ್ತಿಯ ರೈತರು ಸಂವಾದದಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಕೃಷಿ ಅಧಿಕಾರಿ ಮೀರಾ ಎ.ಪಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.