ಸಿದ್ದಾಪುರ, ಜ. 5: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟಲು ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಕಳೆದೆರಡು ದಿನಗಳ ಹಿಂದೆ ಪುಲಿಯೇರಿ ಇಂಜಿಲಗೆರೆ ವ್ಯಾಪ್ತಿಯಲ್ಲಿ ಕಾಡಾನೆಗಳು ಬೀಡು ಬಿಟ್ಟು ಪುಟ್ಟ ಬಾಲಕಿಯ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕರಡಿಗೋಡು ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ಇಂಜಿಲಗೆರೆ ಭಾಗಕ್ಕೆ ಸಿದ್ದಾಪುರ, ಜ. 5: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟಲು ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಕಳೆದೆರಡು ದಿನಗಳ ಹಿಂದೆ ಪುಲಿಯೇರಿ ಇಂಜಿಲಗೆರೆ ವ್ಯಾಪ್ತಿಯಲ್ಲಿ ಕಾಡಾನೆಗಳು ಬೀಡು ಬಿಟ್ಟು ಪುಟ್ಟ ಬಾಲಕಿಯ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ ಓಡಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕರಡಿಗೋಡು ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ಇಂಜಿಲಗೆರೆ ಭಾಗಕ್ಕೆ ಕಾಡಾನೆಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಿಗೆ ಓಡಿಸಲು ಯತ್ನಿಸಿದರು. ಆದರೆ ಎರಡು ಕಾಡಾನೆಗಳು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಕಂಡಕೂಡಲೆ ಅಟ್ಟಿಸಿಕೊಂಡು ಬರುತಿದ್ದವು ಎನ್ನಲಾಗಿದೆ. ಇದರಿಂದ ತಪ್ಪಿಸಿಕೊಳ್ಳಲು ಸಿಬ್ಬಂದಿ ಮರಗಳನ್ನು ಏರಿದ್ದಾರೆ. ಕಾಡಾನೆಗಳು ಪಟಾಕಿ ಸಿಡಿಸಿದರೂ ತೋಟದಿಂದ ಹೊರ ಹೋಗಲು ಹಿಂದೇಟು ಹಾಕುತ್ತಿದ್ದು, ಆಹಾರವನ್ನು ಅರಸಿಕೊಂಡು ಕಾಡಿನಿಂದ ನಾಡಿಗೆ ಬರುತ್ತಿವೆ. ಕಾಡಿನಲ್ಲಿ ಆಹಾರ ಮತ್ತು ನೀರಿನ ಕೊರತೆ ಇರುವ ಕಾರಣ ಕಾಡಾನೆಗಳು ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಅಲ್ಲದೆ ಮಾನವನ ಮೇಲೆ ಧಾಳಿ ನಡೆಸುತ್ತಿವೆ. ಕೂಡಲೇ ಸರಕಾರ ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಯೋಜನೆಯನ್ನು ರೂಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

(ಮೊದಲ ಪುಟದಿಂದ) ಅರಣ್ಯ ಇಲಾಖೆಯಿಂದ ಅನುದಾನ

ಅರಣ್ಯ ಪ್ರದೇಶ ವ್ಯಾಪ್ತಿಯಿಂದ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳಿಗೆ ಹೋಗಿಬರುವ ವಾಹನದ ಖರ್ಚುಗಳನ್ನು ವೀರಾಜಪೇಟೆ ವಲಯ ಅರಣ್ಯ ಇಲಾಖೆಯಿಂದ ನೀಡಲಾಗುತ್ತ್ತದೆ ಎಂದು ಎಸಿಎಫ್ ರೋಷ್ನಿ ತಿಳಿಸಿದ್ದಾರೆ. ಇತ್ತೀಚೆಗೆ ಶಾಲಾ ವಿದ್ಯಾರ್ಥಿಗಳ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆಯಿಂದಾಗಿ ಶಾಲಾ ಶಿಕ್ಷಕಿ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ವಾಹನ ಕಲ್ಪಿಸಿಕೊಡುವಂತೆ ಅರಣ್ಯ ಇಲಾಖೆಗೆ ಮನವಿ ಪತ್ರ ನೀಡಿದ ಮೇರೆಗೆ ಆ ಶಾಲೆಗೆ ಮಾಸಿಕ 10 ಸಾವಿರ ರೂಪಾಯಿಗಳನ್ನು ಅರಣ್ಯ ಇಲಾಖೆಯಿಂದ ನೀಡಲಾಗುವುದೆಂದು ರೋಷ್ನಿ ತಿಳಿಸಿದ್ದಾರೆ ಈಗಾಗಲೇ ವೀರಾಜಪೇಟೆ ವಲಯ ವ್ಯಾಪ್ತಿಯಲ್ಲಿ ಶಾಲೆಗಳಿಗೆ ಅನುದಾನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. -ವಾಸು.