ಮಡಿಕೇರಿ, ಜ. 7: ರಾಜಾಸೀಟು ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಿದ್ದು, ಪ್ಲಾಸ್ಟಿಕ್ ಬಳಸುವುದು ಮತ್ತು ಪುಷ್ಪಗಳನ್ನು ಕೀಳುವುದು ಕಂಡು ಬಂದಲ್ಲಿ 100 ರೂ. ದಂಡ ವಿಧಿಸಲು ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಫೆಬ್ರವರಿ 7 ರಿಂದ 10 ರವರೆಗೆ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡು. ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು. ರಾಜಾಸೀಟಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಪಾದಚಾರಿ ಮಾರ್ಗವನ್ನು ಮತ್ತಷ್ಟು ವಿಸ್ತಾರಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿದರು. ರಾಜಾಸೀಟು ಬಳಿ ಹೆಚ್ಚಿನ ವಿದ್ಯುತ್ ದೀಪಗಳ ಅಳವಡಿಕೆಗೆ ಮತ್ತು ನಿರ್ವಹಣೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ಮಾತನಾಡಿ, ಪ್ರಸ್ತುತ ಆರ್ಥಿಕ ವರ್ಷದಲ್ಲಿ ರಾಜಾಸೀಟು ಪ್ರವೇಶ ಶುಲ್ಕದಿಂದ ರೂ. 70 ಲಕ್ಷ ಆದಾಯ ಬಂದಿರುವುದಾಗಿ ಸಭೆಯ ಗಮನಕ್ಕೆ ತಂದರು.

ಫಲಪುಷ್ಪ ಪ್ರದರ್ಶನಕ್ಕೆ ಅಗತ್ಯ ಸಿದ್ಧ್ದತೆಗಳನ್ನು ಮಾಡಿಕೊಂಡಿದ್ದು, ರೂ. 20 ಲಕ್ಷ ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸುತ್ತಿರುವು ದಾಗಿ ಸಭೆಗೆ ತಿಳಿಸಿದರು.

(ಮೊದಲ ಪುಟದಿಂದ) ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ್ ಮಾತನಾಡಿ, ರಾಜಾಸೀಟು ಉದ್ಯಾನವನದಲ್ಲಿ ತಾ. 11 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಏರ್ಪಡಿಸಿರುವು ದಾಗಿ ಸಭೆಯ ಗಮನಕ್ಕೆ ತಂದರು.

ಕೂರ್ಗ್ ಹೆರಿಟೇಜ್ ಸೆಂಟರ್‍ನ ಅಭಿವೃದ್ಧಿ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಕೊಡಗಿನ ಸಂಸ್ಕøತಿ, ಸ್ಥಳೀಯ ಪರಂಪರೆ ಮತ್ತು ಸಂಪ್ರದಾಯಗಳಿಗೆ ಸಂಬಂಧಿಸಿದಂತೆ ಕೂರ್ಗ್ ಹೆರಿಟೇಜ್ ಸೆಂಟರ್‍ನಲ್ಲಿ ಪ್ರವಾಸಿಗರಿಗೆ ಅನಾವರಣಗೊಳಿಸಬೇಕು ಎಂದು ತಿಳಿಸಿದರು.

ಪ್ರಾಚ್ಯ ವಸ್ತು ಸಂಗ್ರಹಾಲಯದ ಅಧಿಕಾರಿಗಳಿಗೆ ಪಾರಂಪರಿಕ ಐತಿಹಾಸಿಕ ಪರಂಪರೆ ಬಿಂಭಿಸುವ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಮೀನುಗಾರಿಕಾ ಇಲಾಖೆ ವತಿಯಿಂದ ವಿಶೇಷ ಮತ್ಸ್ಯ ಪ್ರದರ್ಶ ನದ ಮಳಿಗೆಗಳನ್ನು ನಿರ್ಮಿಸಲಾಗು ವುದು ಎಂದು ತಿಳಿಸಿದರು. ಸೈನಿಕ ಕಲ್ಯಾಣ ಇಲಾಖೆ ವತಿಯಿಂದ ಕೊಡಗಿನ ವೀರ ಯೋಧರ ಛಾಯಾಚಿತ್ರ ಪ್ರದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಡಗಿನ ತೋಟಗಾರಿಕೆ, ಕೃಷಿ, ಜೇನು ಕೃಷಿ, ಸಂಬಂಧಿಸಿದ ಮಾಹಿತಿಗಳನ್ನು ಕೂರ್ಗ್ ಹೆರಿಟೇಜ್ ಸೆಂಟರ್‍ನಲ್ಲಿ ಪ್ರವಾಸಿಗರಿಗೆ ಮಾಹಿತಿ ಒದಗಿಸಲು ಅಗತ್ಯ ಕ್ರಮ ಕೈಗೊಂಡಿರುವುದಾಗಿ ತೋಟಗಾರಿಕಾ ಉಪ ನಿರ್ದೇಶಕರಾದ ಚಂದ್ರಶೇಖರ್ ಅವರು ಸಭೆಗೆ ತಿಳಿಸಿದರು.

ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದ ಡೀನ್ ಕುಶಾಲಪ್ಪ ಅವರು ಕೂರ್ಗ್ ಹೆರಿಟೇಜ್ ಸೆಂಟರ್‍ನಲ್ಲಿ ನೈಸರ್ಗಿಕ ವಾಗಿ ಏಲಕ್ಕಿ ಗಿಡಗಳು ಹಾಗೂ ವಿವಿಧ ಸ್ಥಳೀಯ ಬಗೆಯ ಸಸಿಗಳನ್ನು ಬೆಳೆಸಿ ಪ್ರಾಕೃತಿಕವಾಗಿ ಅಭಿವೃದ್ಧಿ ಪಡಿಸಲು ಹಲವು ಸಲಹೆ ನೀಡಿದರು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರಮೋದ್ ಅವರು ಹಲವು ವಿಷಯಗಳನ್ನು ಸಭೆಯ ಗಮನಕ್ಕೆ ತಂದರು. ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ದೇವಕಿ, ನಗರಸಭೆ ಪೌರಾಯುಕ್ತ ರಮೇಶ್, ಪ್ರಾಚ್ಯ ವಸ್ತು ಸಂಗ್ರಹಾಲಯದ ಕ್ಯೂರೇಟರ್ ರೇಖಾ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜೆ. ಮದನ್ ಮೋಹನ್, ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ಪ್ರಭು, ಇತರರು ಇದ್ದರು.