ಕೂಡಿಗೆ, ಜ. 17: ಕೂಡು ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಡೆಬೆಟ್ಟ ಹಾಡಿಯಲ್ಲಿ ಅರಣ್ಯ ಹಕ್ಕು ಸಮಿತಿಯ ಸಹಯೋಗದಲ್ಲಿ ವಿಶೇಷ ಗ್ರಾಮಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಕೂಡುಮಂಗಳೂರು ಗ್ರಾಂ.ಪಂ. ಅಧ್ಯಕ್ಷೆ ಲಕ್ಷ್ಮಿ ವಹಿಸಿದ್ದರು. ಸಭೆಯಲ್ಲಿ ಅರಣ್ಯ ಹಕ್ಕು ಸಮಿತಿಯ ವಿಚಾರಗಳನ್ನು ಸವಿಸ್ತಾರವಾಗಿ ಹಾಡಿಯ ಗ್ರಾಮಸ್ಥರಿಗೆ ತಿಳಿಸಲಾಯಿತು. ಕುಶಾಲನಗರ ವಲಯ ಅರಣ್ಯ ಅಧಿಕಾರಿ ಅನನ್ಯ ಕುಮಾರ್ ಇಲಾಖೆಯ ವಿಚಾರಗಳನ್ನು ತಿಳಿಸಿದರು. ಈ ಸಂದರ್ಭ ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ಅಜಿತ್ ಮತ್ತು ವಾರ್ಡ್ ಸದಸ್ಯರು ಅರಣ್ಯ ಹಕ್ಕು ಸಮಿತಿ ಸದಸ್ಯರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯಿಷಾ ಮತ್ತು ಕಾರ್ಯದರ್ಶಿ ಮಾದಪ್ಪ ಮತ್ತು ಸಿಬ್ಬಂದಿ ವರ್ಗ ಕೂಡಿಗೆ ವಿಭಾಗದ ಗ್ರಾಮ ಲೆಕ್ಕಿಗ ಗುರುದರ್ಶನ್ ಮತ್ತು ಉಪ ವಲಯ ಅರಣ್ಯ ಅಧಿಕಾರಿ ಅನಿಲ್ ಡಿಸೋಜ ಸಿಬ್ಬಂದಿ ವರ್ಗ ಮತ್ತು ಹಾಡಿಯ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.