ಕೂಡಿಗೆ, ಜ.18: ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ, ಹಾಲು ಉತ್ಪಾದಕರ ಸಹಕಾರ ಸಂಘ ಮದಲಾಪುರ, ಗ್ರಾಮ ಪಂಚಾಯಿತಿ ಕೂಡಿಗೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಪಶು ಚಿಕಿತ್ಸಾಶಿಬಿರ ಮದಲಾಪುರದ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ತಾ. 20ರಂದು ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಟಿ. ಗಿರೀಶ್ ವಹಿಸಲಿದ್ದಾರೆ. ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳ ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ, ತಾಲೂಕು ಪಂಚಾಯಿತಿ ಸದಸ್ಯೆ ಸಬೀತಾ ಚನ್ನಕೇಶವ. ಗ್ರಾಮ ಪಂಚಾಯಿತಿ ಸದಸ್ಯೆ ಕಲ್ಪನಾ, ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ ಕೆ.ಕೆ. ಹೇಮಂತ್ ಕುಮಾರ್ ಮದಲಾಪುರ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಎಸ್.ಎನ್. ರಾಜಾರಾವ್, ಉಪಾಧ್ಯಕ್ಷ ಪುಟ್ಟಣ್ಣಯ್ಯ, ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಪ ನಿರ್ದೇಶಕ ಡಾ. ಎ.ಬಿ. ತಮ್ಮಯ್ಯ, ತಾಲೂಕು ಸಹಾಯಕ ನಿರ್ದೇಶಕ ಡಾ. ಎಸ್.ವಿ. ಬದಾಮಿ, ವಿಸ್ತರಣಾಧಿಕಾರಿ ವೀಣಾ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶ್ವಿನಿ, ತಾಂತ್ರಿಕ ಮಾಹಿತಿ ಡಾ. ಕೆ. ನಾಗರಾಜ ನೀಡಲಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.