ಮಡಿಕೇರಿ, ಜ.17 : ತ್ರಿವಿಧ ದಾಸೋಹಿ ಡಾ.ಶ್ರೀಶಿವಕುಮಾರ ಮಹಾಸ್ವಾಮಿಯವರ ಪ್ರಥಮ ಪುಣ್ಯ ಸಂಸ್ಮರಣೋತ್ಸವವು ತಾ.19ರಂದು (ಇಂದು) ತುಮಕೂರಿನ ಶ್ರೀಸಿದ್ಧಗಂಗಾ ಕ್ಷೇತದಲ್ಲಿ ನಡೆಯಲಿದೆ ಎಂದು ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿಗಳು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಶ್ರೀ ಸಿದ್ಧಗಂಗಾಮಠದ ಅಧ್ಯಕ್ಷರಾದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿರುವ ಪುಣ್ಯ ಸಂಸ್ಮರಣೋತ್ಸವವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದು, ಮೈಸೂರು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರಿನ ಬೇಲಿಮಠದ ಅಧ್ಯಕ್ಷ ಶ್ರೀ ಶಿವರುದ್ರ ಮಹಾಸ್ವಾಮೀಜಿ ಹಾಗೂ ಕನಕಪುರ ದೇಗುಲಮಠದ ಅಧ್ಯಕ್ಷ ಶ್ರೀ ಮುಮ್ಮಡಿ ನಿರ್ವಾಣ ಮಹಾ ಸ್ವಾಮೀಜಿಗಳು ಉಪಸ್ಥಿತರಿರ ಲಿದ್ದಾರೆಂದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಶರಣ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಎಸ್.ಮಹೇಶ್, ವೀರಶೈವ ಮಹಾಸಭಾದ ಜಿಲ್ಲಾ ಉಪಾಧ್ಯಕ್ಷ ಜಿ.ಎಂ.ಕಾಂತರಾಜು, ಮಹಾಸಭಾದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕೆ.ಬಿ.ಹಾಲಪ್ಪ, ಶರಣ ಸಾಹಿತ್ಯ ಪರಿಷತ್‍ನ ಜಿಲ್ಲಾ ಖಜಾಂಚಿ ಡಿ.ಬಿ.ಸೋಮಪ್ಪ, ಶರಣ ಸಾಹಿತ್ಯ ಪರಿಷತ್‍ನ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಮಹದೇವಪ್ಪ ಉಪಸ್ಥಿತರಿದ್ದರು.