ಸುಂಟಿಕೊಪ್ಪ, ಜ. 18: ನೆಂಟರ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬರು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹೆಚ್ಚಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಸಂಭವಿಸಿದೆ. ಮೂಲತಃ ತಮಿಳುನಾಡಿನ ವರೆನ್ನಲಾದ ಮುತ್ತಯ್ಯ (50) ಎಂಬವರು ಕೂತಿಯ ತೋಟ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಸುಂಟಿಕೊಪ್ಪದ ಉಲುಗುಲಿ ತೋಟದಲ್ಲಿ ಕಾರ್ಮಿಕರಾಗಿರುವ ತನ್ನ ಸಂಬಂಧಿ ರಾಜು ಎಂಬವರ ಮನೆಗೆ ಬಂದಿದ್ದರು. ಇಂದು ಬೆಳಿಗ್ಗೆ 8.45ರ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ. ವಿಷಯವರಿತ ಸುತ್ತಲಿನವರು ಬಂದು ನೋಡಿದಾಗ ಮುತ್ತಯ್ಯನವರ ದೇಹ ಸುಟ್ಟು ಕರಕಲಾಗಿದ್ದಿದು ಕಂಡುಬಂದಿದೆ. ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ. ಮೃತ ಮುತ್ತಯ್ಯ ಪಾಶ್ರ್ವವಾಯು ಪೀಡಿತರಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಕ್ಯೂಟ್ ಕೂರ್ಗ್ ನ್ಯೂಸ್