ಕುಶಾಲನಗರ, ಜ. 23: ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಹಾ ಮೃತ್ಯುಂಜಯ ಹೋಮ ಪೂಜಾ ಕಾರ್ಯಕ್ರಮ ನಡೆಯಿತು. ಅಯ್ಯಪ್ಪಸ್ವಾಮಿ ದೇವಾಲಯ ಆವರಣದಲ್ಲಿರುವ ಗಣಪತಿ ದೇವರ 20ನೇ ವಾರ್ಷಿಕ ಪೂಜೆ ಹಿನ್ನೆಲೆಯಲ್ಲಿ ನಡೆದ ವಿಶೇಷ ಪೂಜಾ ಕಾರ್ಯಕ್ರಮ ಅರ್ಚಕರಾದ ರಾಘವೇಂದ್ರ ಭಟ್, ಸುಬ್ರಮಣ್ಯ ಭಟ್, ಕೃಷ್ಣಮೂರ್ತಿ ಭಟ್, ವಿಷ್ಣುಮೂರ್ತಿ ಭಟ್, ಸೋಮಶೇಖರ್ ಭಟ್ ನೇತೃತ್ವದಲ್ಲಿ ನಡೆಯಿತು.

ಸುತ್ತಮುತ್ತಲ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಅಯ್ಯಪ್ಪಸ್ವಾಮಿ ದೇವಾಲಯ ಟ್ರಸ್ಟ್ ಅಧ್ಯಕ್ಷರಾದ ಗಣಪತಿ, ಮಾಜಿ ಅಧ್ಯಕ್ಷ ಕೆ.ಆರ್. ಶಿವಾನಂದನ್, ಟ್ರಸ್ಟಿಗಳಾದ ಪಿ.ಜಿ. ಗಂಗಾಧರ್, ಡಿ.ಆರ್. ಸೋಮಶೇಖರ್, ಮಣಿ, ಶ್ರೀನಿವಾಸರಾವ್, ಸಮಿತಿಯ ಪ್ರಮುಖರಾದ ಚಂದ್ರು, ಶ್ರೀನಿವಾಸ್, ಎಂ.ಎನ್. ಚಂದ್ರಮೋಹನ್, ಕುಶಾಲನಗರ ದೇವಾಲಯ ಒಕ್ಕೂಟ ಸಮಿತಿಯ ಅಧ್ಯಕ್ಷ ಎಂ.ಕೆ. ದಿನೇಶ್, ವಿ.ಎನ್. ವಸಂತಕುಮಾರ್, ಎಚ್.ಎನ್. ಮುರಳೀಧರ್ ಮತ್ತಿತರರು ಇದ್ದರು.