ಮಡಿಕೇರಿ, ಜ. 23: ಕೇರಳ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಕೊಝಿಕೋಡ್ ಅಥ್ಲೆಟಿಕ್ಸ್ ಸಂಸ್ಥೆಯ ಆಶ್ರಯದಲ್ಲಿ ಅಲ್ಲಿನ ಒಲಿಂಪಿಯನ್ ರೆಹಮಾನ್ ಸ್ಟೇಡಿಯಂನಲ್ಲಿ ನಡೆದ 40ನೇ ಇಂಡಿಯನ್ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಜಿಲ್ಲೆಯ ಎಡಿಕೇರಿ ವಿಶಾಲಾಕ್ಷಿ ಅವರು ಚಿನ್ನ ಹಾಗೂ ಕಂಚಿನ ಪದಕ ಪಡೆದುಕೊಂಡಿದ್ದಾರೆ.

5 ಸಾವಿರ ಮೀಟರ್ ನಡಿಗೆಯಲ್ಲಿ ಮೂರನೇ ಹಾಗೂ 4x100 ರಿಲೇಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ. ಪ್ರಸ್ತುತ ಇವರು ಮಡಿಕೇರಿಯಲ್ಲಿ ಗ್ರಹ ರಕ್ಷಕ ದಳದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.